ನವದೆಹಲಿ: ಕಳೆದ 21-28 ದಿನಗಳಿಂದ ಭಾರತದ ಸುಮಾರು 136 ಜಿಲ್ಲೆಗಳಲ್ಲಿ ಒಂದೇ ಒಂದು ಕೊರೋನವೈರಸ್ ಪ್ರಕರಣ ದಾಖಲಾಗಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಅವರು ಗುರುವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಉತ್ತರ ಪ್ರದೇಶ, ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ COVID-19 ನಿರ್ವಹಣೆಗೆ ಸಿದ್ಧತೆ ಮತ್ತು ಪ್ರಸರಣ ತಡೆಗಟ್ಟುವಿಕೆ ಕ್ರಮಗಳನ್ನು ಆರೋಗ್ಯ ಸಚಿವರು ಪರಿಶೀಲಿಸಿದರು. ದೇಶಾದ್ಯಂತ 180 ಜಿಲ್ಲೆಗಳು ಕಳೆದ ಏಳು ದಿನಗಳಿಗಿಂದ ಸೋಂಕಿನ ಯಾವುದೇ ಹೊಸ ನಿದರ್ಶನಗಳನ್ನು ವರದಿ ಮಾಡಿಲ್ಲ ಎಂದು ಅವರು ಹೇಳಿದರು.
ಮತ್ತೆ 180 ಜಿಲ್ಲೆಗಳಲ್ಲಿ ಕಳೆದ 7-13 ದಿನಗಳಲ್ಲಿ ಯಾವುದೇ ಹೊಸ ಪ್ರಕರಣಗಳು ಕಂಡು ಬಂದಿಲ್ಲ. 14-20 ದಿನಗಳಲ್ಲಿ 164 ಜಿಲ್ಲೆಗಳು ಯಾವುದೇ ಹೊಸ ಪ್ರಕರಣಗಳನ್ನು ದಾಖಲಿಸಿಲ್ಲ, 136 ಜಿಲ್ಲೆಗಳಲ್ಲಿ ಕಳೆದ 21 ರಿಂದ 28 ದಿನಗಳಲ್ಲಿ ಯಾವುದೇ ಕೊರೊನಾವೈರಸ್ ಸೋಂಕಿನ ಪ್ರಕರಣಗಳು ವರದಿಯಾಗಿಲ್ಲ ಎಂದು ಸಚಿವರು ಗುರುವಾರ ತಿಳಿಸಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಯಾವುದೇ ಹೊಸ ಪ್ರಕರಣಗಳನ್ನು ವರದಿ ಮಾಡದ ಕನಿಷ್ಠ 13 ರಾಜ್ಯಗಳು ಮತ್ತು ಕೇಂದ್ರ ಪ್ರದೇಶಗಳನ್ನು ಕೇಂದ್ರ ಆರೋಗ್ಯ ಸಚಿವರು ಪಟ್ಟಿ ಮಾಡಿದ್ದಾರೆ. ಇವುಗಳಲ್ಲಿ ಛತ್ತೀಸ್ಗಢ, ಜಾರ್ಖಂಡ್, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಕೇರಳ, ಮಿಜೋರಾಂ, ಮಣಿಪುರ, ಗೋವಾ, ಮೇಘಾಲಯ, ಲಡಾಖ್, ಅರುಣಾಚಲ ಪ್ರದೇಶ, ಒಡಿಶಾ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಸೇರಿವೆ. ದಮನ್ ಮತ್ತು ಡಿಯು, ಸಿಕ್ಕಿಂ, ನಾಗಾಲ್ಯಾಂಡ್ ಮತ್ತು ಲಕ್ಷದ್ವೀಪ ದ್ವೀಪಗಳು ಇಲ್ಲಿಯವರೆಗೆ ಒಂದೇ ಒಂದು ಪ್ರಕರಣವನ್ನು ವರದಿ ಮಾಡಿಲ್ಲ ಎಂದು ಅವರು ಹೇಳಿದರು.
ಹರ್ಷವರ್ಧನ್ ಅವರ ಪ್ರಕಾರ, ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಕೇಂದ್ರ ಸಂಸ್ಥೆಗಳಿಗೆ ಸುಮಾರು 29.06 ಲಕ್ಷ ಪರ್ಸನಲ್ ಪ್ರೋಟೆಕ್ಷನ್ ಇಕ್ಯುಪ್ಮೆಂಟ್ (ಪಿಪಿಇ) ಮತ್ತು 62.77 ಲಕ್ಷ ಎನ್ -95 ಮುಖಗವಸುಗಳನ್ನು ವಿತರಿಸಲಾಗಿದೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.