ಲಕ್ನೋ: ದೊಡ್ಡ ದೊಡ್ಡ ನಗರಗಳಿಗೆ ವಲಸೆ ಹೋಗಿರುವ ಉತ್ತರಪ್ರದೇಶದ ಕಾರ್ಮಿಕರು ಯಾವುದೇ ಕಾರಣಕ್ಕೂ ನಡೆದುಕೊಂಡು ತವರಿಗೆ ಆಗಮಿಸಿದಂತೆ ನೋಡಿಕೊಳ್ಳಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ತಮ್ಮ ಅಧಿಕಾರಿಗಳಿಗೆ ಖಡಕ್ ಸೂಚನೆಯನ್ನು ನೀಡಿದ್ದಾರೆ.
ವಲಸೆ ಕಾರ್ಮಿಕರನ್ನು ಕರೆದುಕೊಂಡು ಬರುವ ಸಲುವಾಗಿ ಬೇಕಾದ ಎಲ್ಲ ವ್ಯವಸ್ಥೆಗಳನ್ನು ಸಮರ್ಪಕವಾಗಿ ಮಾಡಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕೆಲವು ಕಾರ್ಮಿಕರು ತಮ್ಮ ಕುಟುಂಬದೊಂದಿಗೆ, ಪುಟ್ಟಪುಟ್ಟ ಮಕ್ಕಳೊಂದಿಗೆ ಕಾಲ್ನಡಿಗೆಯ ಮೂಲಕ ನೂರಾರು ಕಿಲೋಮೀಟರ್ ಕ್ರಮಿಸಿ ತವರು ಸೇರುತ್ತಿದ್ದಾರೆ. ಕನ್ನಡಿಗೆ ಸಂದರ್ಭ ಹಲವರು ಅಸ್ವಸ್ಥಗೊಳ್ಳುತ್ತಿದ್ದಾರೆ, ಈಗಾಗಲೇ ಸಾವು ಸಂಭವಿಸಿದ ವರದಿಗಳೂ ಆಗಿವೆ. ಈ ಹಿನ್ನೆಲೆಯಲ್ಲಿ ಯೋಗಿಯವರು ಕಾಲ್ನಡಿಗೆಯಲ್ಲಿ ಯಾವ ವಲಸಿಗನೂ ರಾಜ್ಯಕ್ಕೆ ಬಾರದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಈಗಾಗಲೇ ಉತ್ತರ ಪ್ರದೇಶವು ತಮ್ಮ ರಾಜ್ಯದ ವಲಸೆ ಕಾರ್ಮಿಕರನ್ನು ಕರೆತರುವ ಸಲುವಾಗಿ ಸಮರ್ಪಕವಾದ ವ್ಯವಸ್ಥೆಗಳನ್ನು ಮಾಡಿಕೊಂಡಿದೆ.
ಕಳೆದ ಸಂಜೆ ಮುಖ್ಯಮಂತ್ರಿಗಳ ಆದೇಶದ ಮೇರೆಗೆ, ದೆಹಲಿ ಮತ್ತು ನೋಯ್ಡಾದಿಂದ ಉತ್ತರಪ್ರದೇಶಕ್ಕೆ ಆಗಮಿಸುತ್ತಿದ್ದ ಸುಮಾರು 172 ಕಾರ್ಮಿಕರನ್ನು ಬುಲಂದ್ಸರದಲ್ಲಿ ತಡೆದು ನಿಲ್ಲಿಸಲಾಗಿದೆ. ಬಳಿಕ ಅವರಿಗೆ ಆಹಾರಗಳನ್ನು ನೀಡಿ ಸ್ಥಳೀಯ ಕಾಲೇಜೊಂದಕ್ಕೆ ಶಿಫ್ಟ್ ಮಾಡಲಾಗಿದೆ. ಅವರಿಗೆ ತವರಿಗೆ ಮರಳಲು ಬಸ್ ವ್ಯವಸ್ಥೆ ಮಾಡಿಕೊಡುವುದಾಗಿ ಜಿಲ್ಲಾಡಳಿತ ಭರವಸೆ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.