ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶುಕ್ರವಾರ ಕೈಲಾಸ ಮಾನಸ ಸರೋವರ ಯಾತ್ರೆ ಲಿಂಕ್ ರೋಡ್ ಅನ್ನು ಉದ್ಘಾಟನೆಗೊಳಿಸಿದ್ದಾರೆ.
ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಸೇನಾಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
“ಮಾನಸ ಸರೋವರ ಯಾತ್ರೆಯ ಲಿಂಕ್ ರೋಡ್ ಉದ್ಘಾಟಿಸಲು ಅತೀವ ಸಂತೋಷವಾಗುತ್ತಿದೆ. ಬಾರ್ಡರ್ ರೋಡ್ಸ್ ಆರ್ಗನೈಸೇಶನ್ ಕೈಲಾಸ ಮಾನಸ ಸರೋವರ ಯಾತ್ರಾ ಮಾರ್ಗ ಎಂದು ಕರೆಯಲ್ಪಡುವ ಧರ್ಚುಲದಿಂದ ಲಿಪುಲೇಖ(ಚೀನಾ ಗಡಿ)ಗೆ ರಸ್ತೆ ಸಂಪರ್ಕ ಒದಗಿಸಲು ಯಶಸ್ವಿಯಾಗಿದೆ” ಎಂದು ರಾಜನಾಥ ಸಿಂಗ್ ಟ್ವೀಟ್ ಮಾಡಿದ್ದಾರೆ.
Delighted to inaugurate the Link Road to Mansarovar Yatra today. The BRO achieved road connectivity from Dharchula to Lipulekh (China Border) known as Kailash-Mansarovar Yatra Route. Also flagged off a convoy of vehicles from Pithoragarh to Gunji through video conferencing. pic.twitter.com/S8yNeansJW
— Rajnath Singh (@rajnathsingh) May 8, 2020
“ಬಾರ್ಡರ್ ರೋಡ್ಸ್ ಆರ್ಗನೈಸೇಶನ್ ಕೈಲಾಸ-ಮಾನಸ ಸರೋವರ ರಸ್ತೆಯನ್ನು ಚೀನಾ ಗಡಿಗೆ ಸಂಪರ್ಕಿಸಿದೆ. ಕೊರೋನಾ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುತ್ತಾ, ಉತ್ತರಾಖಂಡದ ಬಿಆರ್ಓ 17,060 ಅಡಿ ಎತ್ತರದ ಕೈಲಾಸ ಮಾನಸ ಸರೋವರ ರಸ್ತೆಯಿಂದ ಲಿಪುಲೇಖ ಪಾಸ್ಗೆ ಸಂಪರ್ಕವನ್ನು ಕಲ್ಪಿಸಿದೆ. ಈ ಮೂಲಕ ಗಡಿ ಗ್ರಾಮಗಳು ಮತ್ತು ಭದ್ರತಾ ಪಡೆಗಳಿಗೆ ಸಂಪರ್ಕವನ್ನು ಒದಗಿಸಿದೆ” ಎಂದು ಸಚಿವಾಲಯ ಟ್ವೀಟ್ ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.