ಲಕ್ನೋ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗಬೇಕಿರುವ ರಾಮಮಂದಿರದ ಕಾಮಗಾರಿ ಆರಂಭಗೊಂಡಿದೆ. ಲಾಕ್ಡೌನ್ ಸಡಿಲಗೊಂಡು ನಿರ್ಮಾಣ ಚಟುವಟಿಕೆಗಳಿಗೆ ಅವಕಾಶ ಸಿಕ್ಕಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಅನುಮತಿಯ ಮೇರೆಗೆ ಕಾಮಗಾರಿಯನ್ನು ಆರಂಭಿಸಲಾಗಿದೆ.
ತಾತ್ಕಾಲಿಕ ದೇವಾಲಯದ ಸುತ್ತಲೂ ನಿರ್ಮಿಸಲಾದ ಲೋಹದ ಬ್ಯಾರಿಕೇಡ್ಗಳನ್ನು ಮತ್ತು ಸ್ಥಳದಲ್ಲಿದ್ದ ಸಿಆರ್ಪಿಎಫ್ ಶಿಬಿರವನ್ನು ಗುರುವಾರ ತೆರವುಗೊಳಿಸಲಾಗಿದೆ ಮತ್ತು ನೆಲದ ಸಮತಟ್ಟುಗೊಳಿಸುವಿಕೆಯನ್ನು ಪ್ರಾರಂಭಿಸಲಾಗಿದೆ.
ಪಿಡಬ್ಲ್ಯುಡಿ ಅಧಿಕಾರಿಗಳ ಸ್ಥಳೀಯ ತಂಡವು ಲಾರ್ಸೆನ್ ಆಂಡ್ ಟೌಬ್ರೊದ ಎಂಜಿನಿಯರ್ಗಳೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಲಾರ್ಸೆನ್ ಆಂಡ್ ಟೌಬ್ರೋ ಕಂಪನಿಯು ದೇವಾಲಯದ ನಿರ್ಮಾಣದ ಮೇಲ್ವಿಚಾರಣೆಯನ್ನು ವಹಿಸಲಿದೆ. ದೇವಾಲಯದ ನಿರ್ಮಾಣಕ್ಕೆ ಕಂಪನಿಯು ಲಾಭರಹಿತ, ನಷ್ಟ ದಹಿತ ಆಧಾರದ ಮೇಲೆ ಕಾರ್ಯನಿರ್ವಹಿಸಲಿದೆ.
ದೇವಾಲಯ ನಿರ್ಮಾಣದ ಮೇಲ್ವಿಚಾರಣೆ ನಡೆಸುತ್ತಿರುವ ಶ್ರೀ ರಾಮ ತೀರ್ಥ ಕ್ಷೇತ್ರ ಟ್ರಸ್ಟ್ನ ಕಾರ್ಯದರ್ಶಿ ಚಂಪತ್ ರಾಯ್ ಮಾತನಾಡಿ, ಹಂತ ಹಂತವಾಗಿ ಕಾಮಗಾರಿ ನಡೆಯುತ್ತಿದೆ ಎಂದಿದ್ದಾರೆ.
“ಭಗವಾನ್ ರಾಮನ ವಿಗ್ರಹವನ್ನು ಅದರ ಹೊಸ ವಾಸಸ್ಥಾನಕ್ಕೆ ಸ್ಥಳಾಂತರಿಸಲಾಗಿದೆ ಮತ್ತು ಈಗ ನಾವು ಬ್ಯಾರಿಕೇಡ್ಗಳನ್ನು ತೆಗೆದುಹಾಕಿ ನೆಲವನ್ನು ನೆಲಸಮಗೊಳಿಸುವ ಮೂಲಕ ದೇವಾಲಯ ನಿರ್ಮಾಣಕ್ಕಾಗಿ ಸ್ಥಳವನ್ನು ತೆರವುಗೊಳಿಸಿ ಸ್ವಚ್ಛಗೊಳಿಸುತ್ತಿದ್ದೇವೆ. ಮಣ್ಣಿನ ಶಕ್ತಿಯನ್ನು ಪರೀಕ್ಷಿಸಲು ಮಣ್ಣಿನ ಪರೀಕ್ಷೆಯನ್ನು ಸಹ ಮಾಡಲಾಗುವುದು. ಟ್ರಸ್ಟ್ ಸದಸ್ಯರು ವಿಡಿಯೋ ಕರೆಗಳ ಮೂಲಕ ಸಭೆಗಳು ಮತ್ತು ಕೆಲಸದ ಪ್ರಗತಿಯ ಕುರಿತು ಚರ್ಚೆ ನಡೆಸುತ್ತಿದ್ದಾರೆ” ಎಂದು ಅವರು ಹೇಳಿದರು.
ರಾಮ್ ಕುಚ್ಚೇರಿ ದೇವಸ್ಥಾನದಲ್ಲಿರುವ ಟ್ರಸ್ಟ್ನ ಕಚೇರಿ ಕೂಡ ಶೀಘ್ರದಲ್ಲೇ ಪೂರ್ಣಗೊಳ್ಳಲಿದ್ದು, ಲಾಕ್ಡೌನ್ ತೆಗೆದ ಕೂಡಲೇ ಟ್ರಸ್ಟ್ ಅಲ್ಲಿಂದ ಕೆಲಸ ಮಾಡಲು ಪ್ರಾರಂಭಿಸುತ್ತದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.