ನವದೆಹಲಿ: ವಲಸಿಗ ಕಾರ್ಮಿಕರನ್ನು ಕರೆ ತರುವ ಕೇಂದ್ರ ಸರ್ಕಾರದ ಪ್ರಯತ್ನಕ್ಕೆ ಪಶ್ಚಿಮಬಂಗಾಳ ಸರಕಾರವು ಸಹಕಾರವನ್ನು ನೀಡುತ್ತಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆರೋಪಿಸಿದ್ದಾರೆ.
ರೈಲ್ವೆ ಸಚಿವಾಲಯವು ಶ್ರಮಿಕ ರೈಲಿನ ಮೂಲಕ ವಲಸೆ ಕಾರ್ಮಿಕರನ್ನು ಕರೆತರುತ್ತಿದೆ. ಆದರೆ ಪಶ್ಚಿಮ ಬಂಗಾಳ ಶ್ರಮಿಕ ರೈಲಿಗೆ ಪ್ರವೇಶವನ್ನು ನಿರಾಕರಿಸುತ್ತಿದೆ ಎಂದು ಅಮಿತ್ ಶಾ ಅವರು ಆರೋಪಿಸಿದ್ದಾರೆ.
ಕಾರ್ಮಿಕರನ್ನು ಹೊತ್ತು ತರುತ್ತಿರುವ ರೈಲಿಗೆ ಪ್ರವೇಶವನ್ನು ನಿರಾಕರಿಸಿರುವುದು ಅನ್ಯಾಯ ಎಂದು ಅವರು ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರಿಗೆ ಹೇಳಿದ್ದಾರೆ.
ಈ ಬಗ್ಗೆ ಪತ್ರ ಬರೆದಿರುವ ಅವರು, “ರೈಲ್ವೆ ಸಚಿವಾಲಯ ಓಡಿಸುತ್ತಿರುವ ಶ್ರಮಿಕ ರೈಲುಗಳ ಮೂಲಕ ದೇಶದಾದ್ಯಂತ ಸಿಲುಕಿ ಹಾಕಿಕೊಂಡಿರುವ ಪಶ್ಚಿಮಬಂಗಾಳದ ಕಾರ್ಮಿಕರನ್ನು ಕರೆತರಲಾಗುತ್ತಿದೆ. ಆದರೆ ಈ ರೈಲು ತನ್ನ ರಾಜ್ಯ ಪ್ರವೇಶಿಸುವುದನ್ನು ಅಲ್ಲಿನ ಸರಕಾರ ನಿರಾಕರಿಸುವುದು ಅನ್ಯಾಯ” ಎಂದಿದ್ದಾರೆ.
“ಪಶ್ಚಿಮ ಬಂಗಾಳದಿಂದ ನಮಗೆ ನಿರೀಕ್ಷಿತ ಬೆಂಬಲ ಸಿಗುತ್ತಿಲ್ಲ. ರಾಜ್ಯ ಸರಕಾರವು ರೈಲುಗಳ ಪ್ರವೇಶಕ್ಕೆ ಅವಕಾಶ ನೀಡುತ್ತಿಲ್ಲ. ಇದು ಬಂಗಾಳ ವಲಸೆ ಕಾರ್ಮಿಕರಿಗೆ ಮಾಡಲಾಗುತ್ತಿರುವ ಅನ್ಯಾಯ. ಇದು ಅವರಿಗೆ ಮತ್ತಷ್ಟು ಸಂಕಷ್ಟವನ್ನು ಉಂಟು ಮಾಡಲಿದೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.