ಬೆಂಗಳೂರು: ವಿದೇಶ ಮತ್ತು ಬೇರೆ ರಾಜ್ಯಗಳಿಂದ ಕರ್ನಾಟಕಕ್ಕೆ ಆಗಮಿಸುತ್ತಿರುವ ಕನ್ನಡಿಗರ ಕ್ವಾರಂಟೈನ್ ವಿಚಾರವಾಗಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರು ಮಹತ್ವದ ಸಭೆ ನಡೆಸಿದ್ದಾರೆ.
ತಮ್ಮ ಗೃಹ ಕಛೇರಿ ಕೃಷ್ಣಾದಲ್ಲಿ ಸಂಬಂಧಿಸಿದ ಸಚಿವರೊಂದಿಗೆ ಈ ಬಗ್ಗೆ ಚರ್ಚೆ ನಡೆಸಿದ್ದಾರೆ. ಹೊರ ರಾಜ್ಯದಿಂದ ರಾಜ್ಯಕ್ಕೆ ಆಗಮಿಸುವವರು ಕಡ್ಡಾಯವಾಗಿ ಆನ್ಲೈನ್ನಲ್ಲಿ ನೋಂದಾವಣೆ ಮಾಡಿಕೊಳ್ಳುವುದು ಮತ್ತು ಕಡ್ಡಾಯ ಕ್ವಾರಂಟೈನ್ಗೆ ಒಳ ಪಡುವುದಕ್ಕೆ ಬೇಕಾದ ವ್ಯವಸ್ಥೆ ಮಾಡುವ ಬಗ್ಗೆಯೂ ಯಡಿಯೂರಪ್ಪ ಮಾತುಕತೆ ನಡೆಸಿದ್ದಾರೆ.
ಅನಿವಾರ್ಯವಾಗಿ ಬೇರೆ ರಾಜ್ಯದಲ್ಲಿ ಸಿಲುಕಿಕೊಂಡವರಷ್ಟೇ ಇದಕ್ಕೆ ಅರ್ಹರಾಗಿದ್ದು, ಎಲ್ಲಿಗೆ ಮತ್ತು ಯಾವಾಗ ಬರುತ್ತೇವೆ ಎಂಬುದನ್ನೂ ನೋಂದಾವಣೆಯ ಸಂದರ್ಭದಲ್ಲಿ ತಿಳಿಸಬೇಕು. ಇನ್ನು ಆಗಮಿಸಿದವರಿಗೆ 14 ದಿನಗಳ ಕ್ವಾರಂಟೈನ್ ಕಡ್ಡಾಯವಾಗಿದ್ದು, ಆ ಬಳಿಕವಷ್ಟೇ ಅವರವರ ಮನೆಗೆ ತೆರಳಲು ಅವಕಾಶ ನೀಡಲಾಗುತ್ತದೆ. ಈ ಮೊದಲು ತಪಾಸಣೆಗೆ ಒಳಪಟ್ಟವರೂ ಸಹ ಮತ್ತು ನಮ್ಮ ಕಡ್ಡಾಯವಾಗಿ ತಪಾಸಣೆಗೊಳಪಡಲೇ ಬೇಕು ಎಂಬುದಾಗಿಯೂ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಜೊತೆಗೆ ಕರ್ನಾಟಕದ ವ್ಯಕ್ತಿ ಬೇರೆ ರಾಜ್ಯದಲ್ಲಿ ಮೃತರಾದರೆ, ಅಲ್ಲೇ ಅಂತ್ಯಸಂಸ್ಕಾರ ನಡೆಸಬೇಕು. ಶವವನ್ನು ರಾಜ್ಯಕ್ಕೆ ತರುವಂತಿಲ್ಲ ಎಂಬ ಮಹತ್ವದ ಆದೇಶವನ್ನು ಸಿಎಂ ಈ ಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಈ ಸಭೆಯಲ್ಲಿ ಡಿಸಿಎಂ ಗೋವಿಂದ ಖಾರಜೋಳ, ಡಿಸಿಎಂ ಅಶ್ವತ್ಥ ನಾರಾಯಣ, ಸಚಿವರಾದ ಆರ್. ಅಶೋಕ್, ಡಾ. ಕೆ. ಸುಧಾಕರ್, ಸುರೇಶ್ ಕುಮಾರ್ ಮೊದಲಾದವರು ಭಾಗವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.