ನವದೆಹಲಿ: ಲಾಕ್ಡೌನ್ ಹಿನ್ನೆಲೆಯಲ್ಲಿ ಸಿಲುಕಿ ಹಾಕಿಕೊಂಡಿರುವ ವಲಸಿಗರನ್ನು ಸ್ಥಳಾಂತರಿಸಲು ಅನುಮತಿ ನೀಡುವಂತೆ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಎಲ್ಲಾ ರಾಜ್ಯಗಳಿಗೆ ಮನವಿ ಮಾಡಿದ್ದಾರೆ. ರಾಜ್ಯಗಳು ಒಪ್ಪಿಕೊಂಡರೆ ವಲಸಿಗ ಕಾರ್ಮಿಕರನ್ನು ಮುಂದಿನ 3 ರಿಂದ 4 ದಿನಗಳಲ್ಲಿ ಮರಳಿ ತಮ್ಮ ಮನೆಗಳಿಗೆ ಕಳುಹಿಸಬಹುದು ಎಂದು ಅವರು ಹೇಳಿದ್ದಾರೆ.
ಈ ವಿಷಯದಲ್ಲಿ ಪ್ರಧಾನ ಮಂತ್ರಿಗಳ ಮಧ್ಯಪ್ರವೇಶದ ನಂತರ, ದೇಶದಲ್ಲಿ ಪ್ರತಿದಿನ 300 ಶ್ರಮಿಕ್ ವಿಶೇಷ ರೈಲುಗಳನ್ನು ಓಡಿಸಲು ರೈಲ್ವೆ ಸಂಪೂರ್ಣ ಸಜ್ಜಾಗಿದೆ ಎಂದು ಟ್ವೀಟ್ನಲ್ಲಿ ಗೋಯಲ್ ಹೇಳಿದ್ದಾರೆ. ಭಾರತೀಯ ರೈಲ್ವೆ ದೇಶಾದ್ಯಂತ ಇದುವರೆಗೆ 350ಕ್ಕೂ ಹೆಚ್ಚು ಶ್ರಮಿಕ್ ವಿಶೇಷ ರೈಲುಗಳನ್ನು ಓಡಿಸಿ ಮೂರು ಲಕ್ಷ ಐವತ್ತು ಸಾವಿರಕ್ಕೂ ಹೆಚ್ಚು ಕಾರ್ಮಿಕರನ್ನು ಕರೆದೊಯ್ದಿದೆ.
I appeal to all the States to give permission to evacuate and bring back their stranded migrants so that we can get all of them back to their homes in the next 3-4 days itself.
— Piyush Goyal (@PiyushGoyal) May 10, 2020
ಈ ರೈಲುಗಳು ಆಂಧ್ರಪ್ರದೇಶ, ಬಿಹಾರ, ಉತ್ತರ ಪ್ರದೇಶ, ಹಿಮಾಚಲ ಪ್ರದೇಶ, ಜಾರ್ಖಂಡ್, ಮಧ್ಯಪ್ರದೇಶ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ ವಿವಿಧ ರಾಜ್ಯಗಳಿಂದ ವಲಸೆ ಕಾರ್ಮಿಕರನ್ನು ಮರಳಿ ಅವರ ತವರಿಗೆ ಕರೆತಂದಿವೆ. ರಾಷ್ಟ್ರವ್ಯಾಪಿ ಲಾಕ್ಡೌನ್ ಘೋಷಣೆಯಾದಾಗಿನಿಂದ, ಭಾರತೀಯ ರೈಲ್ವೆ ರಾಷ್ಟ್ರಕ್ಕೆ ನಿಜವಾದ ಜೀವಸೆಲೆ ಎಂಬುದನ್ನು ನಿರಂತರವಾಗಿ ಸಾಬೀತುಪಡಿಸಿದೆ.
ರೈಲ್ವೆ ಸಾಮಾನ್ಯ ಪ್ರಯಾಣಿಕ ರೈಲು ಸೇವೆಗಳನ್ನು ನೀಡುತ್ತಿಲ್ಲ, ಆದರೆ ಸಿಲುಕಿರುವ ವಲಸೆ ಕಾರ್ಮಿಕರನ್ನು ಅವರ ತವರಿಗೆ ಹಿಂದಿರುಗಿಸುವ ಮೂಲಕ ಲಕ್ಷಾಂತರ ಕುಟುಂಬಗಳ ಮುಖಗಳಲ್ಲಿ ನಗು ತರಿಸುತ್ತಿದೆ. ಲಾಕ್ಡೌನ್ ನಡುವೆ, ರೈಲುಗಳು ಜನರನ್ನು ಪ್ರಯಾಗರಾಜ್, ಚಾಪ್ರಾ, ಬಲಿಯಾ, ಗಯಾ, ಪೂರ್ಣಿಯಾ, ವಾರಣಾಸಿ, ಲಕ್ನೋ ಮತ್ತು ಇನ್ನೂ ಅನೇಕ ನಗರಗಳಿಗೆ ಕರೆದೊಯ್ದಿದೆ. ಒಂದು ಶ್ರಮಿಕ್ ವಿಶೇಷ ರೈಲಿನಲ್ಲಿ ಗರಿಷ್ಠ 1200 ಪ್ರಯಾಣಿಕರಿಗೆ ಪ್ರಯಾಣಿಸಲು ಅವಕಾಶವಿದೆ. ರೈಲು ಹತ್ತುವ ಮೊದಲು ಪ್ರಯಾಣಿಕರನ್ನು ಸರಿಯಾಗಿ ಪರೀಕ್ಷಿಸುವುದನ್ನು ಖಚಿತಪಡಿಸಿಕೊಳ್ಳಲಾಗುತ್ತದೆ.
ರೈಲ್ವೆ ಪ್ರಯಾಣಿಕರಿಗೆ ಪ್ರಯಾಣಿಕರಿಗೆ ಉಚಿತ ಊಟ ಮತ್ತು ನೀರನ್ನು ಸಹ ಒದಗಿಸಲಾಗುತ್ತಿದೆ. ಅಂತಹ ಪ್ರಯಾಣಿಕರ ರೈಲುಗಳ ಸಂಚಾರಕ್ಕೆ ರಾಜ್ಯಗಳ ಒಪ್ಪಿಗೆ ಅಗತ್ಯವಾಗಿರುವುದರಿಂದ ವಿವಿಧ ರಾಜ್ಯಗಳಲ್ಲಿನ ರೈಲ್ವೆ ನೋಡಲ್ ಅಧಿಕಾರಿಗಳು ರಾಜ್ಯ ಸರ್ಕಾರದ ಪ್ರತಿನಿಧಿಗಳೊಂದಿಗೆ ನಿರಂತರವಾಗಿ ಸಮನ್ವಯ ಸಾಧಿಸುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.