ಉಡುಪಿ : ದೇಶದಲ್ಲಿ ಕೊರೋನಾ ಸಂಕಷ್ಟದಿಂದ ಆರ್ಥಿಕ ಪರಿಸ್ಥಿತಿ ಹದೆಗೆಟ್ಟಿದೆ. ಇಂತಹ ಪರಿಸ್ಥಿತಿಯಲ್ಲಿ ಪೋಷಕರಿಗೆ ಶಾಲಾ ಶುಲ್ಕ ಪಾವತಿ ಮಾಡುವುದಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈ ಸಂಕಷ್ಟವನ್ನು ಅರಿತ ಉಡುಪಿಯ ಅದಮಾರು ಮಠದ 2 ಶಾಲೆಗಳ 1 ತಿಂಗಳ ವಿದ್ಯಾರ್ಥಿಗಳ ಶಾಲಾ ಶುಲ್ಕವನ್ನು ಮಠದ ವತಿಯಿಂದಲೇ ಪಾವತಿಸುವುದಾಗಿ ಶ್ರೀ ವಿಶ್ವಪ್ರಿಯ ಶ್ರೀಪಾದರು ಹೇಳಿದ್ದಾರೆ.
ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅದಮಾರು ಮಠದ ವತಿಯಿಂದ ನಡೆಯುತ್ತಿರುವ ಅದಮಾರು ಗ್ರಾಮದ ಪೂರ್ಣಪ್ರಜ್ಞ ಶಾಲೆ ಹಾಗೂ ಪಡುಬಿದ್ರಿಯ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಂದ ಶುಲ್ಕ ಪಡೆಯದೇ ಇರಲು ನಿರ್ಧರಿಸಿದ್ದಾರೆ. ಸುಮಾರು 2000 ವಿದ್ಯಾರ್ಥಿಗಳ 21 ಲಕ್ಷ ರೂ. ಗಳನ್ನು ಮಠವೇ ಭರಿಸಲಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ. ಅಲ್ಲದೆ ಆರ್ಥಿಕ ಸಂಕಷ್ಟದ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಧನ ಸಹಾಯ ನೀಡುವುದಾಗಿಯೂ ಅವರು ಮಾಹಿತಿ ನೀಡಿದ್ದಾರೆ.
ಸದ್ಯ ಲಾಕ್ಡೌನ್ನಿಂದಾಗಿ ಮಠಕ್ಕೆ ಭಕ್ತರು ಆಗಮಿಸಲಾಗುತ್ತಿಲ್ಲ. ಈಗಾಗಲೇ ಮಠದ ವತಿಯಿಂದ ಸುಮಾರು 2000 ಕುಟುಂಬಗಳಿಗೆ ದಿನಸಿ ವಿತರಿಸಲಾಗಿದೆ. ಜೊತೆಗೆ ಪ್ರಧಾನಮಂತ್ರಿ ಕೇರ್ಸ್ಗೆ 55,55,555 ರೂ. ಗಳ ದೇಣಿಗೆಯನ್ನು ಮಠದ ವತಿಯಿಂದ ನೀಡಲಾಗಿದೆ ಎಂದು ಸ್ವಾಮೀಜಿ ಮಾಹಿತಿ ನೀಡಿದ್ದಾರೆ. ಜೊತೆಗೆ ಇಂತಹ ಪರಿಸ್ಥಿತಿಯಿಂದ ನಮ್ಮನ್ನು ನಾವು ಕಾಪಾಡಿಕೊಳ್ಳಲು ಸರ್ಕಾರ ಕೈಗೊಂಡ ಎಲ್ಲಾ ಕ್ರಮಗಳನ್ನು ಪಾಲಿಸುವಂತೆಯೂ ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.