ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಜೆ 4 ಗಂಟೆಗೆ ರಾಷ್ಟ್ರ ರಾಜಧಾನಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಸಂದರ್ಭದಲ್ಲಿ ಅವರು 20 ಲಕ್ಷ ಕೋಟಿ ರೂಪಾಯಿ ವಿಶೇಷ ಅರ್ಥಿಕ ಪ್ಯಾಕೇಜ್ ಬಗ್ಗೆ ವಿವರಣೆಯನ್ನು ನೀಡಲಿದ್ದಾರೆ.
ಮಂಗಳವಾರ ರಾತ್ರಿ 8 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿಯವರು, ಕೊರೋನಾವೈರಸ್ ಬಿಕ್ಕಟ್ಟಿನಿಂದ ಹೊಡೆತ ಅನುಭವಿಸಿರುವ ಆರ್ಥಿಕತೆಗೆ ಪುನಃಶ್ಚೇತನ ನೀಡುವ ಸಲುವಾಗಿ ಬರೋಬ್ಬರಿ 20 ಲಕ್ಷ ಕೋಟಿ ರೂಪಾಯಿಗಳ ಪ್ಯಾಕೇಜನ್ನು ಘೋಷಣೆ ಮಾಡಿದ್ದರು. ಬಡವರಿಗೆ ಮತ್ತು ಮಧ್ಯಮ ವರ್ಗದವರಿಗೆ ಈ ಪ್ಯಾಕೇಜ್ ದೊಡ್ಡ ಮಟ್ಟದ ಪ್ರಯೋಜನವನ್ನು ನೀಡಲಿದೆ ಎಂಬ ನಿರೀಕ್ಷೆ ಇದೆ.
ನಿರ್ಮಲಾ ಸೀತಾರಾಮನ್ ಅವರು ಇಂದು ಈ ಪ್ಯಾಕೇಜ್ ಬಗ್ಗೆ ಇಂದು ಸವಿವರ ಮಾಹಿತಿಯನ್ನು ನೀಡಲಿದ್ದಾರೆ. ಯಾವ ವಲಯಕ್ಕೆ ಎಷ್ಟು ಮೊತ್ತ ಸಿಗಲಿದೆ ಎಂಬುದು ಇಂದು ಬಹಿರಂಗವಾಗಲಿದೆ.
ಪ್ರಧಾನಿ ಮೋದಿಯವರು ನಾಲ್ಕನೇ ಹಂತದ ಲಾಕ್ ಡೌನ್ ಇರುವ ಬಗ್ಗೆ ಸೂಚನೆಯನ್ನು ನೀಡಿದ್ದಾರೆ. ಆದರೆ ಈ ಲಾಕಾ ಡೌನ್ ಬೇರೆ ರೀತಿಯಲ್ಲಿ ಇರಲಿದೆ ಎಂದು ಅವರು ಈಗಾಗಲೇ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.