ಬೆಂಗಳೂರು: ಕೊರೋನಾವೈರಸ್ ಕಾರಣದಿಂದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನಲ್ಲಿ ಸಿಲುಕಿಕೊಂಡಿರುವ ಕನ್ನಡಿಗರ ಜೊತೆಗೆ ಸಿಎಂ ಬಿ ಎಸ್ ಯಡಿಯೂರಪ್ಪ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಿದರು.
ಯುಎಇ ಸೇರಿದಂತೆ ಇತರ ಅರಬ್ ರಾಷ್ಟ್ರಗಳ ಮೇಲೆಯೂ ಕೊರೋನಾ ತನ್ನ ಹಿಡಿತ ಸಾಧಿಸಿದೆ. ವಾಣಿಜ್ಯ ಚಟುವಟಿಕೆಗಳಿಗೆ ಬರೆ ನೀಡುವ ಮೂಲಕ ಆರ್ಥಿಕ ಸಂಕಷ್ಟವನ್ನೂ ತಂದೊಡ್ಡಿದೆ. ಇಂತಹ ಸಂದರ್ಭದಲ್ಲಿ ಅಂತಹ ದೇಶಗಳಲ್ಲಿಯೂ ಉದ್ಯೋಗದ ಮೇಲೆ ತೀವ್ರ ತರದ ಪರಿಣಾಮ ಉಂಟಾಗುವ ಸಾಧ್ಯತೆ ಇದೆ. ಈ ಕುರಿತಂತೆ ಅಲ್ಲಿನ ಕನ್ನಡಿಗರ ಜೊತೆ ಮಾತನಾಡಿದ ಮುಖ್ಯಮಂತ್ರಿ ಅವರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ನೆರವು ಕಲ್ಪಿಸುವುದಾಗಿಯೂ ತಿಳಿಸಿದ್ದಾರೆ.
ಇನ್ನು ತಾವು ಕಾರ್ಯ ನಿರ್ವಹಿಸುತ್ತಿರುವ ಕಂಪನಿಗಳು ಸಂಬಳ ನೀಡದೇ ಇರುವುದರಿಂದಲೂ ಕೊಲ್ಲಿ ರಾಷ್ಟ್ರಗಳಲ್ಲಿನ ಉದ್ಯೋಗಸ್ಥರು ಬವಣೆ ಪಡುವಂತಾಗಿದೆ. ಜೊತೆಗೆ ಭಾರತಕ್ಕೆ ಮರಳುವ ಇರಾದೆಯನ್ನೂ ವ್ಯಕ್ತಪಡಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಅವರನ್ನು ಕರೆತರಲು ಸೌಲಭ್ಯ ಕಲ್ಪಿಸಲಾಗಿದ್ದು, ಮರಳಿದ ನಂತರದಲ್ಲಿ 14 ದಿನಗಳ ಕಡ್ಡಾಯ ಕ್ವಾರಂಟೈನ್ಗೆ ಒಳಗಾಗುವಂತೆಯೂ ಯಡಿಯೂರಪ್ಪ ಮನವಿ ಮಾಡಿದ್ದಾರೆ. ಖಾಸಗಿಯಾಗಿ ಹಣ ತೆತ್ತು ಕ್ವಾರಂಟೈನ್ ಮಾಡಿಕೊಳ್ಳುವುದು ಅಥವಾ ಸರ್ಕಾರ ಕಲ್ಪಿಸುವ ಕ್ವಾರಂಟೈನ್ಗೆ ಒಳಪಡುವ ಮೂಲಕ ಸೋಂಕಿನ ಸಂದೇಹಗಳನ್ನು ಬಗೆಹರಿಸುವಂತೆಯೂ ಅವರು ತಿಳಿಸಿದ್ದಾರೆ. ಆದರೆ ಧೈರ್ಯದಿಂದ ಪರಿಸ್ಥಿತಿ ನಿರ್ವಹಣೆ ಮಾಡುವಂತೆಯೂ ಅವರು ಸೂಚಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.