ಬೆಂಗಳೂರು: ಕೊರೋನಾ ಸಂಕಷ್ಟದಿಂದ ಹಣ್ಣು, ತರಕಾರಿ ಬೆಳೆಗಾರರು ಹಾಗೂ ವಿದ್ಯುತ್ ಚಾಲಿತ ಮಗ್ಗಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜನರನ್ನು ಪಾರು ಮಾಡಲು ರಾಜ್ಯ ಸರ್ಕಾರ ಇದೀಗ 162 ಕೋಟಿ ರೂ. ಗಳನ್ನು ಒದಗಿಸುವ ಭರವಸೆ ನೀಡಿದೆ. ಕಳೆದ ವಾರವಷ್ಟೇ ಶ್ರಮಿಕ ವರ್ಗದ ಜನರನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಪ್ಯಾಕೇಜ್ ಘೋಷಿಸಿತ್ತು.
ತರಕಾರಿ ಮತ್ತು ಹಣ್ಣುಗಳನ್ನು ಬೆಳೆದು ಸರಿಯಾಗಿ ಮಾರುಕಟ್ಟೆ ವ್ಯವಸ್ಥೆ ಸಿಗದೆ ಕಂಗಾಲಾಗಿರುವ ರೈತರಿಗೆ ಹೆಕ್ಟೇರ್ ಗೆ 15,000 ರೂ. ಗಳಂತೆ ಪರಿಹಾರ ಒದಗಿಸಲಾಗುತ್ತದೆ. ಇದರಂತೆ ಸುಮಾರು 137 ಕೋಟಿ ರೂ. ಬೆಳೆಗಾರರ ಪರಿಹಾರಕ್ಕೆ ವೆಚ್ಚವಾಗಲಿದೆ. ಹಾಗೆಯೇ ವಿದ್ಯುತ್ ಸಹಾಯದಿಂದ ಕಾರ್ಯನಿರ್ವಹಿಸುವ ಮಗ್ಗಗಳಲ್ಲಿ ದುಡಿಯುವ ಕಾರ್ಮಿಕರಿಗೆ ಒಂದು ಬಾರಿ ತಲಾ 2000 ರೂ. ಗಳಂತೆ ನೀಡುವುದಾಗಿಯೂ ಸರ್ಕಾರ ತಿಳಿಸಿದೆ. ರಾಜ್ಯದ 1.25 ಲಕ್ಷ ವಿದ್ಯುತ್ ಚಾಲಿತ ಮಗ್ಗಗಳ ಕಾರ್ಮಿಕರಿಗೆ 25 ಕೋಟಿ ರೂ. ವೆಚ್ಚವಾಗಲಿದೆ.
ಹಸಿ ಮೆಣಸಿನಕಾಯಿ, ಟೊಮೆಟೊ, ಹೂಕೋಸು, ಎಲೆಕೋಸು, ಸಿಹಿಗುಂಬಳ, ಬೂದುಗುಂಬಳ, ಕ್ಯಾರೆಟ್, ದಪ್ಪ ಮೆಣಸು, ಈರುಳ್ಳಿ, ಸೊಪ್ಪು, ತೊಂಡೆಕಾಯಿ, ಹೀರೆಕಾಯಿ ಮೊದಲಾದ ತರಕಾರಿಗಳು, ಪಪ್ಪಾಯಿ, ಬಾಳೆ, ಟೇಬಲ್ ದ್ರಾಕ್ಷಿ, ಕಲ್ಲಂಗಡಿ, ಖರ್ಜೂರ, ಅನಾನಸು, ಬೆಣ್ಣೆ ಹಣ್ಣು, ಬೋರೆ ಹಣ್ಣು ಮೊದಲಾದ ಹಣ್ಣುಗಳನ್ನು ಬೆಳೆಯುವವರಿಗೆ ಪರಿಹಾರ ನೀಡಲಾಗುತ್ತದೆ ಎಂದು ಸರ್ಕಾರ ಮಾಹಿತಿ ನೀಡಿದೆ.
ಕಳೆದ ಬಾರಿ ಶ್ರಮಿಕ ವರ್ಗವನ್ನು ಗಮನದಲ್ಲಿಟ್ಟುಕೊಂಡು ಪ್ಯಾಕೇಜ್ ಘೋಷಿಸಿದ ಬೆನ್ನಲ್ಲೇ ತರಕಾರಿ ಮತ್ತು ಹಣ್ಣು ಬೆಳೆಗಾರರಿಗೆ, ಹಾಗೆಯೇ ವಿದ್ಯುತ್ ಮಗ್ಗಗಳಲ್ಲಿ ಕಾರ್ಯ ನಿರ್ವಹಿಸುವ ಕಾರ್ಮಿಕರಿಗೂ ನೆರವು ನೀಡುವಂತೆ ರಾಜ್ಯ ಸರ್ಕಾರದ ಮುಂದೆ ಬೇಡಿಕೆ ಇಡಲಾಗಿದ್ದು, ಇದೀಗ ಆ ಬೇಡಿಕೆ ಸರ್ಕಾರ ಅಸ್ತು ಎಂದಿದೆ. ಆ ಮೂಲಕ ರಾಜ್ಯದ ಎಲ್ಲಾ ಜನರ ಸಂಕಷ್ಟಕ್ಕೂ ಸರ್ಕಾರ ಸಹಾಯ ನೀಡುವ ಭರವಸೆ ತುಂಬಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.