ಬೆಂಗಳೂರು : ಮುಖ್ಯಮಂತ್ರಿಯಾಗಿ ನಾನು ರೈತರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದವನು. ಅಂತಹದ್ದರಲ್ಲಿ ರೈತರ ಹಿತಕ್ಕೆ ಧಕ್ಕೆಯಾಗುವಂತಿದ್ದರೆ ತಾನು ಮುಖ್ಯಮಂತ್ರಿಯಾಗಿ ಒಂದು ಕ್ಷಣವೂ ಮುಂದುವರಿಯಲು ಇಚ್ಛೆ ಪಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದ್ದಾರೆ.
ಗೃಹ ಕಛೇರಿ ಕೃಷ್ಣಾದಲ್ಲಿ ಎಪಿಎಂಸಿ ಕಾಯ್ದೆಯ ತಿದ್ದುಪಡಿಯ ಕುರಿತಾದಂತೆ ಮಾತನಾಡಿದ ಅವರು ತಮ್ಮದು ರೈತಪರ ಸರ್ಕಾರ. ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಯಾವುದೇ ರೀತಿಯಲ್ಲಿಯೂ ತೊಂದರೆಯಾಗುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ಇದರಿಂದಾಗಿ ರೈತರು ಮೊದಲು ಎಂಬ ಘೋಷವಾಕ್ಯ ಅನುಷ್ಠಾನವಾಗುತ್ತದೆಯೇ ಹೊರತು, ರೈತರಿಗೆ ಯಾವುದೇ ತೆರನಾದ ಅನಾನುಕೂಲ ಆಗಲಾರದು ಎಂದು ಅವರು ವಿವಾದಕ್ಕೆ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ ಈ ಕಾಯ್ದೆಯಿಂದಾಗಿ ರೈತರು ತಾವು ಬೆಳೆದ ಬೆಳೆಯನ್ನು ನೇರವಾಗಿ ಅಥವಾ ಮಾರುಕಟ್ಟೆ ಪ್ರಾಂಗಣದಲ್ಲಿ ಮಾರಾಟ ಮಾಡಬಹುದಾಗಿದೆ ಎಂದೂ ಅವರು ತಿಳಿಸಿದ್ದಾರೆ.
ಈ ಕಾಯ್ದೆಯನ್ವಯ ಹಿಂದಿನಂತೆಯೇ ಮಾರುಕಟ್ಟೆಗೆ ಸಂಬಂಧಿಸಿದಂತೆ ವಹಿವಾಟುಗಳನ್ನು ನೋಡಿಕೊಳ್ಳವ, ಮೇಲ್ವಿಚಾರಣೆ ಕೆಲಸವನ್ನು ಕೃಷಿ ಮಾರಾಟ ಅಧಿಕಾರಿಗಳೇ ಮಾಡುತ್ತಾರೆ. ಇದರಿಂದ ಎಪಿಎಂಸಿ ಕಾಯ್ದೆಯ ಅಸ್ತಿತ್ವಕ್ಕೂ ಧಕ್ಕೆಯಾಗಲಾರದು. ಅಲ್ಲದೆ ಮಾರುಕಟ್ಟೆಯ ಹೊರಗೂ ರೈತರಿಗೆ ಕೃಷಿ ಉತ್ಪನ್ನಗಳ ಮಾರಾಟಕ್ಕೆ ಅವಕಾಶವಿದೆ ಎಂಬುದನ್ನೂ ಅವರು ಈ ಸಂದರ್ಭದಲ್ಲಿ ಸ್ಪಷ್ಟ ಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.