ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಸಂಜೆ 4 ಗಂಟೆಗೆ ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ 20 ಲಕ್ಷ ಕೋಟಿ ರೂಪಾಯಿಗಳ ಆತ್ಮನಿರ್ಭರ್ ಭಾರತ್ ಯೋಜನೆಗೆ ಸಂಬಂಧಿಸಿದಂತೆ ನಾಲ್ಕನೇ ಹಂತದ ವಿವರಣೆಯನ್ನು ನೀಡಲಿದ್ದಾರೆ.
ಮಧ್ಯಮ ವರ್ಗ ಮತ್ತು ಸಣ್ಣ ವ್ಯಾಪಾರಿಗಳು ಮತ್ತು ಚಿಲ್ಲರೆ ವ್ಯಾಪಾರಿಗಳ ಮೇಲೆ ಇಂದಿನ ವಿವರಣೆ ಕೇಂದ್ರೀಕರಿಸಲಿದೆ ಎಂದು ಮೂಲಗಳು ತಿಳಿಸಿವೆ.
ಶುಕ್ರವಾರ ಸೀತಾರಾಮನ್ ಆತ್ಮನಿರ್ಭರ್ ಭಾರತ್ಗೆ ಸಂಬಂಧಿಸಿದ ಮೂರನೇ ಹಂತದ ಕ್ರಮಗಳನ್ನು ಪ್ರಕಟಿಸಿದ್ದರು. ಮೂರನೇ ಹಂತವು 11 ಕ್ರಮಗಳ ಮೇಲೆ ಕೇಂದ್ರೀಕರಿಸಿತ್ತು. ಅವುಗಳಲ್ಲಿ 8 ಮೂಲಸೌಕರ್ಯ, ಕೃಷಿ ಮತ್ತು ಸಂಬಂಧಿತ ಚಟುವಟಿಕೆಗಳಿಗೆ ಸಂಬಂಧಿಸಿವೆ ಮತ್ತು ಉಳಿದ ಮೂರು ಆಡಳಿತ ಮತ್ತು ಆಡಳಿತ ಸುಧಾರಣೆಗಳಿಗೆ ಸಂಬಂಧಿಸಿವೆ.
ಗುರುವಾರ ಸೀತಾರಾಮನ್ ಆತ್ಮನಿರ್ಭರ್ ಭಾರತ್ಗೆ ಸಂಬಂಧಿಸಿದ ಎರಡನೇ ಹಂತದ ಕ್ರಮಗಳನ್ನು ಪ್ರಕಟಿಸಿದ್ದರು. 2ನೇ ಹಂತವು ವಲಸೆ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಸಣ್ಣ ವ್ಯಾಪಾರಿಗಳು, ಸಣ್ಣ ರೈತರ ಮೇಲೆ ಕೇಂದ್ರೀಕರಿಸಿದೆ.
ಮೇ 13 ರಂದು ಘೋಷಿಸಲಾದ ಮೊದಲ ಹಂತದ ಕ್ರಮಗಳಲ್ಲಿ ಸಚಿವೆ, ವ್ಯವಹಾರಗಳನ್ನು ಪುನರುಜ್ಜೀವನಗೊಳಿಸಲು 15 ಹೊಸ ಮತ್ತು ಕೆಲವು ವರ್ಧಿತ ಕ್ರಮಗಳ ವಿವರಗಳನ್ನು ನೀಡಿದರು.
ಮೇ 12ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಸಂದರ್ಭ ಬರೋಬ್ಬರಿ 20 ಲಕ್ಷ ಕೋಟಿ ರೂಪಾಯಿಗಳ ಆತ್ಮ ನಿರ್ಭರ್ ಭಾರತ್ ಪ್ಯಾಕೇಜ್ ಅನ್ನು ಘೋಷಣೆ ಮಾಡಿದ್ದಾರೆ. ಭಾರತವನ್ನು ಸ್ವಾವಲಂಬಿಯಾಗಿಸುವ ನಿಟ್ಟಿನಲ್ಲಿ ಈ ಪ್ಯಾಕೇಜ್ ಮಹತ್ವದ ಹೆಜ್ಜೆಯನ್ನು ಇಡಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.