ಬೆಂಗಳೂರು: ರಾಜ್ಯದಲ್ಲಿ ನಾಲ್ಕನೇ ಹಂತದ ಲಾಕ್ಡೌನ್ ಕುರಿತಂತೆ ಮಹತ್ವದ ಸಭೆ ನಡೆಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ, ಹೊಸ ಮಾರ್ಗಸೂಚಿ ಹೊರಡಿಸಿದೆ.
ನಾಳೆಯಿಂದ ತೊಡಗಿದಂತೆ ರಾಜ್ಯದಲ್ಲಿ ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ಸುಗಳ ಸಂಚಾರ ಆರಂಭಿಸುವುದಾಗಿಯೂ ತಿಳಿಸಿದ್ದಾರೆ. ರೆಡ್ ಝೋನ್, ಕಂಟೈನ್ಮೆಂಟ್ ಝೋನ್ ಗಳನ್ನು ಹೊರತುಪಡಿಸಿದಂತೆ ಸಾರಿಗೆ ಸಂಪರ್ಕ ವ್ಯವಸ್ಥೆ ಆರಂಭವಾಗುವ ಕುರಿತ ಮಾಹಿತಿಯನ್ನು ಮುಖ್ಯಮಂತ್ರಿ ನೀಡಿದ್ದಾರೆ. ಒಂದು ಬಸ್ ನಲ್ಲಿ 30 ಜನರು ಮಾತ್ರವೇ ಪ್ರಯಾಣ ನಡೆಸಬೇಕು, ಮಾಸ್ಕ್ ರಹಿತ ಪ್ರಯಾಣಕ್ಕೆ ದಂಡ, ಖಾಸಗಿ ಬಸ್ ಗಳೂ ಸಂಚಾರ ನಡೆಸಬಹುದೆನ್ನುವ ಆದೇಶವನ್ನು ಯಡಿಯೂರಪ್ಪ ಜಾರಿಗೆ ತಂದಿದ್ದಾರೆ. ಅಗತ್ಯ ಸಂದರ್ಭದಲ್ಲಿ ಮಾತ್ರವೇ ಅಂತರರಾಜ್ಯ ಸಂಚಾರ ನಡೆಸಬಹುದಾಗಿದೆ.
ರಾಜ್ಯದೊಳಗೆ ರೈಲು ಪ್ರಯಾಣವೂ ಆರಂಭ ಮಾಡುವುದಾಗಿ ರಾಜ್ಯ ಸರ್ಕಾರ ಸಭೆಯ ನಂತರದಲ್ಲಿ ತಿಳಿಸಿದೆ. ವ್ಯಾಪಾರ ವಹಿವಾಟಿಗೆ ಸಂಬಂಧಿಸಿದಂತೆ ವ್ಯಾಪಾರಿಗಳಿಗೆ ಷರತ್ತುಬದ್ಧ ಅನುಮತಿ ನೀಡಲಾಗಿದೆ. ರವಿವಾರ ಸಂಪೂರ್ಣ ಲಾಕ್ಡೌನ್ ಕ್ರಮ ಮುಂದುವರಿಯಲಿದ್ದು , ಜನರು ಮನೆಯಲ್ಲಿಯೇ ಇರುವಂತೆಯೂ ಸರ್ಕಾರ ಸೂಚಿಸಿದೆ. ಇನ್ನು ಪಾರ್ಕ್ ಗಳಿಗೆ ಸಂಬಂಧಿಸಿದಂತೆ ಬೆಳಗ್ಗೆ ಮತ್ತು ಸಂಜೆ ತೆರೆಯುವುದಕ್ಕೆ ಅನುಮತಿ ನೀಡಲಾಗಿದೆ. ಮದುವೆ ಸಮಾರಂಭದಲ್ಲಿ 50 ಜನರಿಗೆ ಭಾಗವಹಿಸುವ ಅವಕಾಶ ನೀಡಲಾಗಿದೆ.
ಹೊಟೇಲ್ಗಳಲ್ಲಿ ಪಾರ್ಸೆಲ್ ನೀಡಬಹುದು. ಆಟೋ, ಕ್ಯಾಬ್ ಪ್ರಯಾಣಕ್ಕೆ ಮಾಸ್ಕ್ ಕಡ್ಡಾಯ. ಜೊತೆಗೆ ಚಾಲಕ ಹೊರತು ಪಡಿಸಿದಂತೆ ಇಬ್ಬರಿಗೆ ಪ್ರಯಾಣಕ್ಕೆ ಅವಕಾಶ, ಮ್ಯಾಕ್ಸಿಕ್ಯಾಬ್ಗಳಲ್ಲಿ ಚಾಲಕ ಹೊರತುಪಡಿಸಿ ಮೂವರು ಪ್ರಯಾಣಿಸಬಹುದಾಗಿದೆ. ರಾತ್ರಿ 7 ರಿಂದ ಬೆಳಗ್ಗೆ 7 ರ ವರೆಗೆ ಕಠಿಣ ಲಾಕ್ಡೌನ್ ನಿಯಮಗಳೇ ಜಾರಿಯಲ್ಲಿರಲಿವೆ ಎಂದೂ ರಾಜ್ಯ ಸರ್ಕಾರ ತೀರ್ಮಾನಿಸಿದೆ. ಬೀದಿ ಬದಿ ವ್ಯಾಪಾರಕ್ಕೆ ಅನುಮತಿ ನೀಡಿದೆ. ಆದರೆ ಪ್ರತಿಯೊಬ್ಬರೂ ಈ ಮೊದಲೇ ತಿಳಿಸಲಾಗಿರುವ ಎಲ್ಲಾ ಲಾಕ್ಡೌನ್ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆಯೂ ಸರ್ಕಾರ ಈ ಸಂದರ್ಭದಲ್ಲಿ ಮನವಿ ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.