ಬೆಂಗಳೂರು: ಮಾರಕ ಕೊರೋನಾದ ವಿರುದ್ಧ ಜೀವ ಪಣಕ್ಕಿಟ್ಟು ಹೋರಾಟ ನಡೆಸುತ್ತಿರುವ ವೈದ್ಯಕೀಯ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ವೇತನ ಹೆಚ್ಚಳದ ಗಿಫ್ಟ್ ನೀಡಿದೆ. ಆ ಮೂಲಕ ಅವರ ನಿಸ್ವಾರ್ಥ ಸೇವೆಗೆ ಕೃತಜ್ಞತೆ ಅರ್ಪಿಸಲು ಮುಂದಾಗಿದೆ.
ರಾಜ್ಯದ ಎಲ್ಲಾ ವೈದ್ಯಕೀಯ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸುಮಾರು 2,500 ರಷ್ಟು ಬೋಧಕ ಸಿಬ್ಬಂದಿಗೆ 7 ನೇಯ ವೇತನ ಆಯೋಗದನ್ವಯ ವೇತನ ಹೆಚ್ಚಿಸಿರುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ. ಕಳೆದ 5 ವರ್ಷಗಳಿಂದ ಈ ಕ್ಷೇತ್ರದಲ್ಲಿ ವೇತನ ಹೆಚ್ಚಳವಾಗದೇ ಇದ್ದು, ಇದೀಗ ಕೊರೋನಾ ಸೋಂಕಿನ ಸಂದರ್ಭದಲ್ಲಿ ಅವರ ಸೇವೆ ನೋಡಿ ಈ ವೇತನ ಪರಿಷ್ಕರಣೆ ಮಾಡುತ್ತಿರುವುದಾಗಿಯೂ ಅವರು ಹೇಳಿದ್ದಾರೆ.
ಪ್ರಸ್ತುತ ಬೋಧಕ ಸಿಬ್ಬಂದಿಗಳ ವೇತನಕ್ಕೆ 1404 ಕೋಟಿ ರೂ. ಗಳನ್ನು ಖರ್ಚು ಮಾಡಲಾಗುತ್ತಿದ್ದು, ವೇತನ ಹೆಚ್ಚಳ ಕ್ರಮದಿಂದಾಗಿ 1542 ಕೋಟಿ ರೂ. ಗಳಿಗೆ ಈ ಮೊತ್ತವನ್ನು ಏರಿಕೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಆರ್ಥಿಕ ಸಂಕಷ್ಟದ ಸಂದರ್ಭದಲ್ಲಿ ಇದು ರಾಜ್ಯಕ್ಕೆ ಹೊರೆಯಾದರೂ ಸಹ ವೇತನ ಹೆಚ್ಚಳ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಔಟ್ ಸರ್ಜನ್ಸ್ಗಳಿಗೆ ತಿಂಗಳಿಗೆ 30,000, ಮೊದಲ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ 45,000, ಎರಡನೆ ವರ್ಷದ ವಿದ್ಯಾರ್ಥಿಗಳಿಗೆ 50,000 ಹಾಗೂ ತೃತೀಯ ವರ್ಷದ ವಿದ್ಯಾರ್ಥಿಗಳಿಗೆ 55,000 ರೂ. ಗಳನ್ನು ಮುಂದಿನ ದಿನಗಳಲ್ಲಿ ಫೆಲೋಶಿಪ್ ಆಗಿ ನೀಡುವುದಾಗಿಯೂ ಅವರು ಮಾಹಿತಿ ನೀಡಿದ್ದಾರೆ. ಸೀನಿಯರ್ ರೆಸಿಡೆಂಟ್ಸ್ ಗಳಿಗೆ 60 ಸಾವಿರ, ಫೆಲೋಶಿಪ್ ವಿದ್ಯಾರ್ಥಿಗಳಿಗೆ ಫೆಲೋಶಿಪ್ ಮೊತ್ತವನ್ನು60 ಸಾವಿರಕ್ಕೆ ಹೆಚ್ಚಳ ಮಾಡಿರುವುದಾಗಿಯೂ ಅವರು ತಿಳಿಸಿದ್ದಾರೆ.
ಇನ್ನು ಈ ಕೊರೋನಾ ವೈರಸ್ನ ಸಂಕಷ್ಟದ ವೇಳೆಯಲ್ಲಿ ರಾಜ್ಯದ ಹಲವು ಕ್ಷೇತ್ರಗಳು ಒಗ್ಗಟ್ಟಾಗಿ ಕೆಲಸ ಮಾಡುತ್ತಿದೆ. ವೈದ್ಯಕೀಯ ಸಿಬ್ಬಂದಿ, ಆಶಾಕಾರ್ಯಕರ್ತೆಯರ ಸೇವೆಯಂತೂ ಅಮೋಘ. ಅವರಿಗೆ ಗೌರವ ಸಲ್ಲಿಸುವ ಸಲುವಾಗಿಯೂ ಈ ವೇತನ ಹೆಚ್ಚಳ ಕ್ರಮಕ್ಕೆ ಮುಂದಾಗಿರುವುದಾಗಿ ಸುಧಾಕರ್ ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.