ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಪೋಲೀಸರು ಹಾಗೂ ಸಿಆರ್ಪಿಎಫ್ ಪಡೆಗಳು ಜಂಟಿಯಾಗಿ ಮಂಗಳವಾರ ನಡೆಸಿದ ಎನ್ಕೌಂಟರ್ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಇಬ್ಬರು ಉಗ್ರರು ಮೃತಪಟ್ಟಿದ್ದಾರೆ. ಮಧ್ಯರಾತ್ರಿಯ ವೇಳೆ ನಡೆದ ಕಾರ್ಯಾಚರಣೆಯಲ್ಲಿ ಅವಿತುಕೊಂಡಿದ್ದ ಉಗ್ರರನ್ನು ನೆಲಕ್ಕೆ ಉರುಳಿಸಲಾಗಿದೆ.
ಮೃತಪಟ್ಟ ಉಗ್ರರಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಆಯುಧಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶ್ರೀನಗರದ ನವಕದಲ್ ಪ್ರದೇಶದಲ್ಲಿ ಉಗ್ರರು ಅವಿತು ಕೊಂಡಿದ್ದಾರೆ ಎಂಬ ಖಚಿತ ಮಾಹಿತಿಯನ್ನು ಆಧರಿಸಿ ಪೊಲೀಸರು ಮತ್ತು ಸಿಆರ್ಪಿಎಫ್ ಸಿಬ್ಬಂದಿಗಳು ಕಾರ್ಯಾಚರಣೆಯನ್ನು ಆರಂಭಿಸಿದ್ದರು. ಈ ವೇಳೆ ಮೂವರು ಭದ್ರತಾ ಸಿಬ್ಬಂದಿಗೆ ಗಾಯಗಳಾಗಿವೆ.
ಉಗ್ರರ ಅಡಗುತಾಣದ ಸುತ್ತ ಕಾರ್ಯಾಚರಣೆಯನ್ನು ನಡೆಸಿದ ಸಂದರ್ಭದಲ್ಲಿ ಏಕಾಏಕಿ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಇದರಿಂದಾಗಿ ಎನ್ಕೌಂಟರ್ ಆರಂಭವಾಗಿದೆ.
2 ವರ್ಷಗಳ ಬಳಿಕ ಶ್ರೀನಗರದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಕಾಶ್ಮೀರ ಕಣಿವೆಯ ಇನ್ಸ್ಪೆಕ್ಟರ್ ಜನರಲ್ ವಿಜಯ್ ಕುಮಾರ್ ಅವರು ಹೇಳಿದ್ದಾರೆ.
ಬಿಎಸ್ಎನ್ಎಲ್ ಸೇವೆಯನ್ನು ಹೊರತುಪಡಿಸಿ ಪ್ರಸ್ತುತ ಪ್ರದೇಶದಲ್ಲಿ ಮೊಬೈಲ್ ಇಂಟರ್ನೆಟ್ ಮತ್ತು ವಾಯ್ಸ್ ಕಾಲಿಂಗ್ ಅನ್ನು ಸ್ಥಗಿತಗೊಳಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.