ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಆಯುಷ್ಮಾನ್ ಭಾರತ ಯೋಜನೆಯು ಒಂದು ಕೋಟಿ ಫಲಾನುಭವಿಗಳನ್ನು ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಒಂದು ಕೋಟಿಯನೇ ಫಲಾನುಭವಿಯೊಂದಿಗೆ ದೂರವಾಣಿ ಮೂಲಕ ಸಂಭಾಷಣೆಯನ್ನು ನಡೆಸಿದರು.
ಮೇಘಾಲಯದ ಪೂಜಾ ಥಾಪಾ ಅವರು ಆಯುಷ್ಮಾನ್ ಭಾರತ ಯೋಜನೆಯ 1 ಕೋಟಿಯನೇ ಫಲಾನುಭವಿ ಆಗಿದ್ದಾರೆ.
2018ರ ಸೆಪ್ಟೆಂಬರ್ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು, ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ-ಆಯುಷ್ಮಾನ್ ಭಾರತ್ ಅನ್ನು ಪ್ರಾರಂಭಿಸಿದ್ದರು. ದೇಶದ ಬಡವರಿಗೆ ಮತ್ತು ಮಧ್ಯಮ ವರ್ಗದ ಜನರಿಗೆ ವಾರ್ಷಿಕ ಐದು ಲಕ್ಷ ರೂಪಾಯಿವರೆಗೆ ಉಚಿತ ಚಿಕಿತ್ಸೆಯನ್ನು ನೀಡುವ ಯೋಜನೆ ಇದಾಗಿದೆ. ವಿಶ್ವದ ಅತಿದೊಡ್ಡ ಆರೋಗ್ಯ ಯೋಜನೆ ಇದೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಯೋಜನೆ 1 ಕೋಟಿ ಫಲಾನುಭವಿಗಳ ಮೈಲಿಗಲ್ಲನ್ನು ಸಾಧಿಸಿದ ಹಿನ್ನಲೆಯಲ್ಲಿ ಟ್ವೀಟ್ ಮಾಡಿರುವ ಮೋದಿ, “ಆಯುಷ್ಮಾನ್ ಭಾರತ ಯೋಜನೆಯು ಒಂದು ಕೋಟಿ ಫಲಾನುಭವಿಗಳನ್ನು ಪಡೆದುಕೊಂಡಿದೆ. ಇದು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ವಿಚಾರ. ಎರಡು ವರ್ಷಗಳೊಳಗೆ ಹಲವರ ಬದುಕಿನಲ್ಲಿ ಇದು ಸಕಾರಾತ್ಮಕ ಪ್ರಭಾವವನ್ನು ಬೀರಿದೆ” ಎಂದಿದ್ದಾರೆ.
“ಅಧಿಕೃತ ಪ್ರವಾಸದ ಸಂದರ್ಭದಲ್ಲಿ, ನಾನು ಆಯುಷ್ಮಾನ ಭಾರತ ಫಲಾನುಭವಿಗಳೊಂದಿಗೆ ಸಂವಹನ ನಡೆಸುತ್ತಿದೆ. ಆದರೆ ಈ ಬಾರಿ ಅದು ಸಾಧ್ಯವಾಗುತ್ತಿಲ್ಲ. ಹೀಗಾಗಿ ದೂರವಾಣಿ ಮೂಲಕ 1 ಕೋಟಿಯನೇ ಫಲಾನುಭವಿಯಾದ ಮೇಘಾಲಯದ ಪೂಜಾ ಥಾಪ ಅವರೊಂದಿಗೆ ಸಂವಹನ ನಡೆಸಿದೆ” ಎಂದು ಮೋದಿ ಹೇಳಿದ್ದಾರೆ.
During my official tours, I would interact with Ayushman Bharat beneficiaries. Sadly, that is not possible these days but I did have a great telephone interaction with Pooja Thapa from Meghalaya, the 1 croreth beneficiary. Here is what we discussed. https://t.co/vsUOEEo5pM
— Narendra Modi (@narendramodi) May 20, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.