ಲಕ್ನೋ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ಮತ್ತು ಅವರ ಪಕ್ಷ ವಲಸಿಗರಿಗಾಗಿ 1000 ಬಸ್ ವ್ಯವಸ್ಥೆಯನ್ನು ಮಾಡಿಕೊಳ್ಳುವ ವಿಷಯದಲ್ಲಿ ದೊಡ್ಡಮಟ್ಟದ ವಿವಾದವನ್ನೇ ಸೃಷ್ಟಿಸಿದೆ. ಸ್ವತಃ ರಾಯ್ ಬರೇಲಿಯ ಕಾಂಗ್ರೆಸ್ ಶಾಸಕಿ ಅಧಿತಿ ಸಿಂಗ್ ಅವರು ಪ್ರಿಯಾಂಕಾ ಅವರ ಕ್ರಮವನ್ನು ಕಟುವಾಗಿ ಖಂಡಿಸಿದ್ದಾರೆ. ಇದಕ್ಕಾಗಿ ಕಾಂಗ್ರೆಸ್ ಪಕ್ಷ ಅವರನ್ನು ಅಮಾನತು ಮಾಡಿದೆ ಎಂದು ವರದಿಗಳು ತಿಳಿಸಿವೆ.
ವಲಸಿಗರಿಗೆ ಸಾವಿರ ಬಸ್ ವ್ಯವಸ್ಥೆ ಮಾಡುವ ಪ್ರಿಯಾಂಕ ಗಾಂಧಿಯವರ ಹೇಳಿಕೆಯು ಕ್ರೂರ ಜೋಕ್ ಆಗಿದೆ ಮತ್ತು ಪಕ್ಷವು ವಂಚನೆಯ ಕಾರ್ಯ ಮಾಡುತ್ತಿದೆ ಎಂದು ಆದಿತಿ ಅವರು ಟ್ವಿಟರ್ ಮೂಲಕ ಆಕ್ರೋಶವನ್ನು ಹೊರಹಾಕಿದ್ದರು.
ಇದೀಗ ಕಾಂಗ್ರೆಸ್ ಪಕ್ಷ ಅವರನ್ನು, ಕಾಂಗ್ರೆಸ್ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಅಮಾನತು ಮಾಡಿದೆ. ಈಗಾಗಲೇ ಪಕ್ಷ ವಿರೋಧಿ ಚಟುವಟಿಕೆ ಆರೋಪವನ್ನು ಅವರ ಮೇಲೆ ಹೊರಿಸಿ, ಉತ್ತರಪ್ರದೇಶದ ವಿಧಾನಸಭಾ ಸ್ಪೀಕರ್ ಅವರಿಗೆ ದೂರನ್ನು ಸಲ್ಲಿಸಿದೆ ಮತ್ತು ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಮನವಿ ಮಾಡಿದೆ.
ಆದಿತ್ಯ ಸಿಂಗ್ ಅವರು ಕಾಂಗ್ರೆಸ್ ಮಹಿಳಾ ಘಟಕವಾದ ಪ್ರಿಯದರ್ಶಿನಿಯ ರಾಷ್ಟ್ರೀಯ ಉಸ್ತುವಾರಿ ಆಗಿದ್ದರು. ಇದೀಗ ಅವರಿಗೆ ನೋಟಿಸ್ ಜಾರಿಗೊಳಿಸಲಾಗಿದ್ದು ಅವರ ಸ್ಪಂದನೆಗಾಗಿ ಕಾಯಲಾಗುತ್ತಿದೆ.
ಒಟ್ಟಿನಲ್ಲಿ ಕಾಂಗ್ರೆಸ್ ಪಕ್ಷವು ಗಾಂಧಿ ಪರಿವಾರದ ವಿರುದ್ಧ ಮಾತನಾಡುವ ಯಾರೊಬ್ಬರನ್ನೂ ಸಹಿಸಿಕೊಳ್ಳುವುದಿಲ್ಲ ಎಂಬುದನ್ನು ಮತ್ತೆ ಸಾಬೀತು ಮಾಡಿ ತೋರಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.