ನವದೆಹಲಿ: ಸೈಕ್ಲೋನ್ ಅಂಫಾನ್ ಪಶ್ಚಿಮ ಬಂಗಾಳ ಮತ್ತು ಒರಿಸ್ಸಾ ರಾಜ್ಯಗಳಲ್ಲಿ ತೀವ್ರ ಹಾನಿಯನ್ನು ಸೃಷ್ಟಿ ಮಾಡಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಎರಡು ರಾಜ್ಯಗಳಿಗೂ ಅಭಯ ಹಸ್ತವನ್ನು ಚಾಚಿದ್ದು, ಬೇಕಾದ ಎಲ್ಲ ನೆರವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ. ಸಂಕಷ್ಟದ ಸಂದರ್ಭದಲ್ಲಿ ಇಡೀ ದೇಶವೇ ಜೊತೆ ನಿಲ್ಲುತ್ತದೆ ಎಂದಿದ್ದಾರೆ.
“ಸೈಕ್ಲೋನ್ ಅಂಫಾನ್ ವಿರುದ್ಧ ದಿಟ್ಟವಾಗಿ ಹೋರಾಟವನ್ನು ನಡೆಸುತ್ತಿರುವ ಒರಿಸ್ಸಾದೊಂದಿಗೆ ನನ್ನ ಪ್ರಾರ್ಥನೆ ಇದೆ. ಹಾನಿಗೊಳಗಾದ ಪ್ರತಿಯೊಬ್ಬರಿಗೂ ಸಾಧ್ಯವಾದ ಎಲ್ಲಾ ಸಹಾಯ ಮಾಡುವ ನಿಟ್ಟಿನಲ್ಲಿ ಆಡಳಿತಗಳು ತಳಮಟ್ಟದಿಂದ ಕಾರ್ಯನಿರ್ವಹಿಸುತ್ತಿವೆ. ಆದಷ್ಟು ಬೇಗ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಲಿಎಂದು ನಾನು ಪ್ರಾರ್ಥಿಸುತ್ತೇನೆ”ಎಂದು ಮೋದಿ ಮೊದಲ ಟ್ವೀಟ್ನಲ್ಲಿ ಹೇಳಿದ್ದಾರೆ.
ಎರಡನೇ ಟ್ವೀಟ್ನಲ್ಲಿ ಅವರು, “ಸೈಕ್ಲೋನ್ ಅಂಫಾನ್ ಪಶ್ಚಿಮ ಬಂಗಾಳದಲ್ಲಿ ಸೃಷ್ಟಿಸಿದ ಅವಾಂತರದ ದೃಶ್ಯಗಳನ್ನು ನಾನು ನೋಡಿದ್ದೇನೆ. ಈ ಸವಾಲಿನ ಸಂದರ್ಭದಲ್ಲಿ, ಇಡೀ ದೇಶವೇ ಪಶ್ಚಿಮಬಂಗಾಳದೊಂದಿಗೆ ಸೌಹಾರ್ದದೊಂದಿಗೆ ನಿಲ್ಲುತ್ತದೆ. ರಾಜ್ಯದ ಜನರ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇವೆ. ಸಹಜ ಸ್ಥಿತಿಗೆ ತರುವ ನಿಟ್ಟಿನಲ್ಲಿ ಪ್ರಯತ್ನಗಳು ಸಾಗಿದೆ” ಎಂದಿದ್ದಾರೆ.
ಎರಡು ರಾಜ್ಯಗಳಿಗೂ ಬೇಕಾದ ಎಲ್ಲ ನೆರವನ್ನೂ ಕೇಂದ್ರ ಒದಗಿಸಲಿದೆ ಎಂದು ಮೋದಿ ಭರವಸೆಯನ್ನು ನೀಡಿದ್ದಾರೆ.
NDRF teams are working in the cyclone affected parts. Top officials are closely monitoring the situation and also working in close coordination with the West Bengal government.
No stone will be left unturned in helping the affected.
— Narendra Modi (@narendramodi) May 21, 2020
“ಚಂಡಮಾರುತ ಪೀಡಿತ ಪ್ರದೇಶಗಳಲ್ಲಿ ಎನ್ಡಿಆರ್ಎಫ್ ಪರಿಹಾರ ಕಾರ್ಯಾಚರಣೆಗಳನ್ನು ನಡೆಸುತ್ತಿದೆ. ಉನ್ನತ ಅಧಿಕಾರಿಗಳು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿದ್ದಾರೆ ಮತ್ತು ಪಶ್ಚಿಮ ಬಂಗಾಳ ಸರಕಾರದೊಂದಿಗೆ ಸೇರಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಂತ್ರಸ್ತರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಯಾವುದೇ ಅವಕಾಶವನ್ನು ಕೈ ಚೆಲುವುದಿಲ್ಲ” ಎಂದಿದ್ದಾರೆ.
ಇದಕ್ಕೂ ಮುನ್ನ ಸಂಪುಟ ಕಾರ್ಯದರ್ಶಿ ರಾಜೀವ್ ಗೂಬ್ ಅವರು ಪಶ್ಚಿಮ ಬಂಗಾಳ ಮತ್ತು ಒರಿಸ್ಸಾದ ಚಂಡಮಾರುತ ಪೀಡಿತ ಪ್ರದೇಶಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಚಿವರು ಮತ್ತು ಏಜೆನ್ಸಿ ಗಳೊಂದಿಗೆ ಪರಿಸ್ಥಿತಿಗಳನ್ನು ಪರಿಶೀಲಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.