ಬೆಂಗಳೂರು: ಕೊರೋನಾ ಸಂಕಷ್ಟದಿಂದ ಪಾರಾಗಲು ಮಾಡಲಾದ ಲಾಕ್ಡೌನ್ ಕ್ರಮ ಇದೀಗ ನಾಲ್ಕನೇ ಹಂತ ತಲುಪಿದೆ. ಈ ವರೆಗೆ ರಾಜ್ಯದೊಳಗಿನ ಪ್ರಯಾಣಕ್ಕೆ ಹೇರಿದ್ದ ನಿರ್ಬಂಧವನ್ನು ನಾಲ್ಕನೇ ಹಂತದ ಲಾಕ್ಡೌನ್ ಸಂದರ್ಭದಲ್ಲಿ ಸಡಿಲಗೊಳಿಸಲಾಗಿದೆ. ಇದೇ ಹಂತದಲ್ಲಿ ಅಂತರರಾಜ್ಯ ಪ್ರಯಾಣದ ಕುರಿತಂತೆಯೂ ಕರ್ನಾಟಕ ಡಿಜಿಪಿ ಪ್ರವೀಣ್ ಸೂದ್ ಅವರು ಮಹತ್ವದ ಮಾಹಿತಿಯೊಂದನ್ನು ನೀಡಿದ್ದಾರೆ.
ರಾಜ್ಯದಿಂದ ಇತರ ರಾಜ್ಯಗಳಿಗೆ ಹೋಗಲಿಚ್ಛಿಸುವವರು, ತಾವು ಹೋಗಬೇಕಾದ ರಾಜ್ಯಗಳಿಂದ ಸಮ್ಮತಿಯನ್ನು ಪಡೆದಿದ್ದ ಪಕ್ಷದಲ್ಲಿ ಕರ್ನಾಟಕದ ಯಾವುದೇ ಪಾಸ್ ಹೊಂದದೆಯೇ ಪ್ರಯಾಣ ಬೆಳೆಸಲು ಒಪ್ಪಿಗೆ ನೀಡಲಾಗಿದೆ ಎಂದು ಪ್ರವೀಣ್ ಸೂದ್ ಮಾಹಿತಿ ನೀಡಿದ್ದಾರೆ. ಕೇಂದ್ರ ಗೃಹಸಚಿವಾಲಯ ಹೊರಡಿಸಿರುವ ನಾಲ್ಕನೇ ಹಂತದ ಲಾಕ್ಡೌನ್ ಮಾರ್ಗಸೂಚಿಗೆ ಅನುಗುಣವಾಗಿಯೇ ಈ ಕ್ರಮವನ್ನು ಅನುಸರಿಸಲಾಗುವುದಾಗಿಯೂ ಸೂದ್ ತಿಳಿಸಿದ್ದಾರೆ.
ಲಾಕ್ಡೌನ್ ಕಾರಣದಿಂದಾಗಿ ವಲಸಿಗ ಕಾರ್ಮಿಕರು, ವಿದ್ಯಾರ್ಥಿಗಳು, ಪ್ರವಾಸಿಗರು, ಯಾತ್ರಿಕರು ದೇಶದ ಎಲ್ಲೆಲ್ಲೋ ಸಿಲುಕಿಕೊಂಡು ಪರದಾಡುವಂತಾಗಿದೆ. ಅವರಿಗೆ ಸ್ವಸ್ಥಾನಕ್ಕೆ ತೆರಳಲು ಅನುಕೂಲವಾಗುವಂತೆ ಈ ನಿಯಮವನ್ನು ಮಾಡಲಾಗಿದೆ ಎಂದೂ ಅವರು ತಿಳಿಸಿದ್ದಾರೆ. ಸರ್ಕಾರ ಈ ಹೊಸ ಮಾರ್ಗಸೂಚಿಯನ್ನು ಅನುಸರಿಸಿ, ನೋಡಲ್ ಅಧಿಕಾರಿಗಳನ್ನು ನೇಮಿಸಿ ಅಂತರರಾಜ್ಯ ಪ್ರಯಾಣಕ್ಕೆ ಅವಕಾಶ ಮಾಡಿಕೊಡುವಂತೆಯೂ ಸೂದ್ ಸೂಚಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.