ಬೆಂಗಳೂರು: ಕೊರೋನಾ 3.O ಲಾಕ್ಡೌನ್ ಮುಗಿದು ದೇಶದೆಲ್ಲೆಡೆ ಇದೀಗ ನಾಲ್ಕನೇ ಹಂತದ ಲಾಕ್ಡೌನ್ ನಿಯಮ ಜಾರಿಯಲ್ಲಿದೆ. ರಾಜ್ಯದಲ್ಲಿ ಈ ಹಂತದ ಲಾಕ್ಡೌನ್ ಯಾವ ರೀತಿಯಲ್ಲಿ ಜಾರಿಯಲ್ಲಿರಲಿವೆ ಎಂಬುದರ ಕುರಿತಾಗಿಯೂ ರಾಜ್ಯ ಸರ್ಕಾರ ನಿಯಮಗಳನ್ನು ಹೊರಡಿಸಿದ್ದು, ಭಾನುವಾರ ಪೂರ್ಣ ಪ್ರಮಾಣದಲ್ಲಿ ಲಾಕ್ಡೌನ್ ಕ್ರಮ ಜಾರಿಯಲ್ಲಿರುವುದಾಗಿಯೂ ತಿಳಿಸಿದೆ.
ಮೇ 31 ರ ವರೆಗೂ ಈ ನಿಯಮಗಳು ಜಾರಿಯಲ್ಲಿರಲಿವೆ. ಭಾನುವಾರ ಬೆಳಗ್ಗೆ 7 ರಿಂದ ರಾತ್ರಿ 7 ರ ವರೆಗೆ ಕಟ್ಟುನಿಟ್ಟಿನ ಲಾಕ್ಡೌನ್ ರಾಜ್ಯದೆಲ್ಲೆಡೆ ಇರಲಿದ್ದು, ಜನರು ಸಾರ್ವಜನಿಕವಾಗಿ ಅನಗತ್ಯ ಓಡಾಟ ನಡೆಸದಂತೆ ಸರ್ಕಾರ ಆಜ್ಞಾಪಿಸಿದೆ.
ಭಾನುವಾರ ಕಟ್ಟುನಿಟ್ಟಿನ ಲಾಕ್ಡೌನ್ ಕ್ರಮ ಜಾರಿಯಲ್ಲಿದ್ದರೂ, ಈಗಾಗಲೇ ನಿರ್ಧರಿಸಲಾದ ವಿವಾಹಗಳನ್ನು ನಡೆಸಲು ಸರ್ಕಾರ ಅನುಮೋದನೆ ನೀಡಿದೆ. ಈ ಕುರಿತಂತೆ ಬಿಡುಗಡೆಗೊಳಿಸಲಾಗಿರುವ ಮಾರ್ಗಸೂಚಿಯಲ್ಲಿಯೂ ಸ್ಪಷ್ಟವಾದ ನಿರ್ದೇಶನವನ್ನು ನೀಡಲಾಗಿದೆ. ಇನ್ನು ಈ ಸಮಾರಂಭದಲ್ಲಿ ಕೇವಲ 50 ಮಂದಿ ಅತಿಥಿಗಳಿಗಷ್ಟೇ ಭಾಗವಹಿಸುವ ಅವಕಾಶವನ್ನು ನೀಡಲಾಗಿದೆ. ಅಲ್ಲದೆ ಸಾಮಾಜಿಕ ಅಂತರ ಕಾಪಾಡಿಕೊಂಡು ಸರಳವಾಗಿ ಮದುವೆ ಕಾರ್ಯಕ್ರಮಗಳನ್ನು ನಡೆಸುವಂತೆಯೂ ಸರ್ಕಾರ ಸೂಚಿಸಿದೆ. ಇನ್ನು ಮದುವೆ ಸಮಾರಂಭದಲ್ಲಿ ಭಾಗವಹಿಸುವವರು ಸಂಬಂಧಿಸಿದ ಜಿಲ್ಲಾಧಿಕಾರಿಗಳಿಂದ ಅನುಮತಿ ಪತ್ರ ಪಡೆದುಕೊಳ್ಳಬೇಕು ಎಂದೂ ಸರ್ಕಾರ ತಿಳಿಸಿದೆ.
ಇನ್ನು ಹವಾನಿಯಂತ್ರಿತ ಛತ್ರಗಳಲ್ಲಿ ಮದುವೆ ನಡೆಸುವಂತಿಲ್ಲ. ಜೊತೆಗೆ ಮದ್ಯಪಾನಕ್ಕೆ ಅವಕಾಶವಿಲ್ಲ. ವೃದ್ಧರು, 10 ವರ್ಷದೊಳಗಿನ ಮಕ್ಕಳು, ಗರ್ಭಿಣಿ ಸ್ತ್ರೀಯರು ಮದುವೆಗಳಲ್ಲಿ ಭಾಗವಹಿಸುವ ಅವಕಾಶವಿಲ್ಲ. ಕಂಟೈನ್ಮೆಂಟ್ ಝೋನ್ಗಳ ಜನರಿಗೆ ಮದುವೆಯಲ್ಲಿ ಭಾಗವಹಿಸಲು ಅವಕಾಶವಿಲ್ಲ. ಮದುವೆ ಸಮಾರಂಭದಲ್ಲಿ ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಝೇಶನ್ ಮಾಡುವುದು ಕಡ್ಡಾಯ ಎಂದೂ ಈ ಸುತ್ತೋಲೆಯಲ್ಲಿ ಸರ್ಕಾರ ತಿಳಿಸಿದೆ. ಈ ಎಲ್ಲಾ ಸೂಚನೆಗಳನ್ನು ಪಾಲಿಸಿಕೊಂಡು ಭಾನುವಾರ ಮದುವೆ ಕಾರ್ಯಕ್ರಮಗಳನ್ನು ನಡೆಸಬಹುದು ಎಂದು ಸರ್ಕಾರ ಅನುಮತಿಯನ್ನು ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.