ಬೆಂಗಳೂರು: ಕೊರೋನಾವೈರಸ್ ದಿನದಿಂದ ದಿನಕ್ಕೆ ತನ್ನ ಸಂತತಿಯನ್ನು ಬೆಳೆಸುತ್ತಲೇ ಇದ್ದು, ಇದು ರಾಜ್ಯಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಈ ನಡುವೆ ನಾಲ್ಕನೇ ಹಂತದ ಲಾಕ್ಡೌನ್ ನಿಯಮಗಳಲ್ಲಿಯೂ ಬಹಳಷ್ಟು ಸಡಿಲಿಕೆ ಮಾಡಲಾಗಿದ್ದು, ಜನ ಸಂಚಾರಕ್ಕೂ ಅವಕಾಶ ನೀಡಲಾಗಿದೆ. ಇದರಿಂದಾಗಿ ಕೊರೋನಾ ಮತ್ತಷ್ಟು ರಣಕೇಕೆ ಹಾಕಲು ತೊಡಗಿದೆ.
ಪರಿಸ್ಥಿತಿಯ ನಿಯಂತ್ರಣಕ್ಕೆ ರಾಜ್ಯ ಸರ್ಕಾರ, ಆರೋಗ್ಯ ಇಲಾಖೆ ಮಹತ್ವದ ನಿರ್ಣಯವೊಂದನ್ನು ಪ್ರಕಟಿಸಿದ್ದು, ರಾಜ್ಯದೊಳಗೆ ಸಂಚರಿಸುವ ಪ್ರತಿಯೊಬ್ಬರನ್ನೂ ತಪಾಸಣೆಗೊಳಪಡಿಸುವ ಕ್ರಮವನ್ನು ಕಡ್ಡಾಯಗೊಳಿಸಿದೆ. ಬಸ್ಸುಗಳಲ್ಲಿ ಮತ್ತು ರೈಲುಗಳಲ್ಲಿ ಸಂಚಾರ ನಡೆಸುವ ಎಲ್ಲಾ ಪ್ರಯಾಣಿಕರೂ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವಂತೆಯೂ ಸೂಚಿಸಿದೆ. ಅದಕ್ಕೆ ಅನುಕೂಲವಾಗುವಂತೆ ಆಯಕಟ್ಟಿನ ಜಾಗಗಳಲ್ಲಿ ಆರೋಗ್ಯ ತಪಾಸಣಾ ಕೇಂದ್ರಗಳನ್ನು ಆರಂಭಿಸಲು ಸರ್ಕಾರ ಸಿದ್ಧತೆ ನಡೆಸಿದೆ.
ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗೆ ಓಡಾಡುವ ಜನರಿಗೆ ಈ ತಪಾಸಣೆ ಕಡ್ಡಾಯವಾಗಿದ್ದು, ತಪಾಸಣೆಯ ವೇಳೆ ಕೊರೋನಾ ಲಕ್ಷಣಗಳು ಕಂಡುಬಂದಲ್ಲಿ ಅವರನ್ನು ಸಮೀಪದ ಆರೋಗ್ಯ ಕೇಂದ್ರಗಳಿಗೆ ದಾಖಲಿಸಲಾಗುವುದಾಗಿಯೂ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಅಂತರ ಜಿಲ್ಲೆ ಪ್ರಯಾಣದ ಕುರಿತು ಆದೇಶ.@CMofKarnataka @BSYBJP @sriramulubjp @drashwathcn @mla_sudhakar @iaspankajpandey @BBMP_MAYOR @BBMPCOMM @KarnatakaVarthe @PIBBengaluru @BlrCityPolice @blrcitytraffic @NammaBESCOM @BMTC_BENGALURU @publictvnews @suvarnanewstv @tv9kannada pic.twitter.com/CxBg00InJt
— K’taka Health Dept (@DHFWKA) May 22, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.