ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಲಾಕ್ಡೌನ್ ನಿಂದಾಗಿ ಸಿಲುಕಿ ಹಾಕಿಕೊಂಡಿರುವ ವಲಸಿಗ ಕಾರ್ಮಿಕರಿಗೆ ಮೇ 31 ರ ವರೆಗೆ ಶ್ರಮಿಕ್ ರೈಲುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವುದಾಗಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಈ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಅವರು ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಯಡಿಯೂರಪ್ಪ ಅವರು, ತಮ್ಮ ಸ್ವಗ್ರಾಮಗಳಿಗೆ ತೆರಳಲು ಪ್ರಯಾಣ ವೆಚ್ಚವನ್ನು ಭರಿಸಲು ಸಾಧ್ಯವಾಗುತ್ತಿಲ್ಲ ಎಂಬ ವಲಸಿಗರ ಮನವಿಯನ್ನು ಸರ್ಕಾರ ಪರಿಗಣಿಸಿದೆ. ರಾಜ್ಯಕ್ಕೆ ನಮ್ಮ ದೇಶದ ಬೇರೆ ಭಾಗಗಳಿಂದ ಬಂದಿರುವ ವಲಸೆ ಕಾರ್ಮಿಕರನ್ನು ನಾವು ನಮ್ಮದೇ ರಾಜ್ಯದ ಜನರು ಎಂದು ಭಾವಿಸುತ್ತೇವೆ. ಮತ್ತು ಅವರ ಕಷ್ಟಕ್ಕೆ ಸರ್ಕಾರ ಸ್ಪಂದಿಸಬೇಕೆಂಬುದು ನನ್ನ ದೃಢ ನಿರ್ಧಾರ ಎಂದು ತಿಳಿಸಿದ್ದಾರೆ. ಅಲ್ಲದೆ ಮೇ 31 ರ ವರೆಗೆ ವಲಸಿಗರ ಶ್ರಮಿಕ್ ರೈಲು ಪ್ರಯಾಣದ ವೆಚ್ಚವನ್ನು ಸರ್ಕಾರ ಭರಿಸುವ ಭರವಸೆಯನ್ನೂ ಅವರು ನೀಡಿದ್ದಾರೆ.
ಕೊರೋನಾ ಲಾಕ್ಡೌನ್ ನಿಂದಾಗಿ ವಲಸಿಗ ಕಾರ್ಮಿಕರು ದೇಶದ ನಾನಾ ಭಾಗಗಳಲ್ಲಿ ಸಿಲುಕಿಕೊಂಡಿದ್ದಾರೆ. ಅವರನ್ನು ಸ್ವಗ್ರಾಮಗಳಿಗೆ ತಲುಪಿಸುವ ಸಲುವಾಗಿ ವಿಶೇಷ ರೈಲು ಸೇವೆ ಶ್ರಮಿಕ್ ಅನ್ನು ಭಾರತೀಯ ರೈಲ್ವೆ ಇಲಾಖೆ ಆರಂಭಿಸಿತ್ತು. ದೇಶದ ಬೇರೆ ಬೇರೆ ಭಾಗಗಳಿಂದ 20 ಲಕ್ಷಕ್ಕೂ ಹೆಚ್ಚಿನ ಜನರು ಈ ವರೆಗೆ ಈ ರೈಲುಗಳ ಮೂಲಕ ತಮ್ಮ ತಮ್ಮ ರಾಜ್ಯಗಳಿಗೆ ತೆರಳಿರುವುದಾಗಿಯೂ ಕೇಂದ್ರ ಸರ್ಕಾರ ಮಾಹಿತಿ ನೀಡಿತ್ತು.
2/2
ಈ ಹಿನ್ನೆಲೆಯಲ್ಲಿ ದಿನಾಂಕ: 31-05-2020 ವರೆಗೆ ಶ್ರಮಿಕ್ ರೈಲುಗಳ ಮೂಲಕ ಸ್ವಗ್ರಾಮಗಳಿಗೆ ತೆರಳಬಯಸುವ ವಲಸೆ ಕಾರ್ಮಿಕರು ಹಾಗೂ ಲಾಕ್ ಡೌನ್ ನಲ್ಲಿ ಸಿಲುಕಿರುವವರ ಪ್ರಯಾಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ.#KarnatakaFightsCorona #IndiaFightsCoronavirus
— CM of Karnataka (@CMofKarnataka) May 22, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.