ನವದೆಹಲಿ: ಕೊರೋನವೈರಸ್ ಬಿಕ್ಕಟ್ಟಿಗೆ ದೇಶವು ತತ್ತರಿಸಿದೆ. ಈ ಸಂದರ್ಭದಲ್ಲಿ ಇಂಡಿಯಾ ಪೋಸ್ಟ್ ಇದುವರೆಗೆ ಲಾಕ್ ಡೌನ್ ಅವಧಿಯಲ್ಲಿ ದೇಶಾದ್ಯಂತದ ಅಗತ್ಯವಿರುವ ವ್ಯಕ್ತಿಗಳು ಮತ್ತು ಆಸ್ಪತ್ರೆಗಳಿಗೆ 2,000 ಟನ್ಗಿಂತಲೂ ಹೆಚ್ಚು ಔಷಧಿಗಳನ್ನು ಮತ್ತು ವೈದ್ಯಕೀಯ ಉಪಕರಣಗಳನ್ನು ತಲುಪಿಸಿದೆ ಎಂದು ಅಧಿಕೃತ ಹೇಳಿಕೆಗಳು ತಿಳಿಸಿವೆ.
ಇದಲ್ಲದೆ, ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕಿನ ಆಧಾರ್ ಆಧಾರಿತ ಪಾವತಿ ವ್ಯವಸ್ಥೆಯನ್ನು (ಎಇಪಿಎಸ್) ಬಳಸಿ ಸುಮಾರು 85 ಲಕ್ಷ ಫಲಾನುಭವಿಗಳಿಗೆ ಸುಮಾರು 1,500 ಕೋಟಿ ರೂ.ಗಳನ್ನು ಮನೆ ಬಾಗಿಲಿಗೆ ವಿತರಿಸಲಾಗಿದೆ, ವಿವಿಧ ಯೋಜನೆಗಳ ಅಡಿಯಲ್ಲಿ 760 ಕೋಟಿ ರೂ.ಮೊತ್ತದ 75 ಲಕ್ಷ ಎಲೆಕ್ಟ್ರಾನಿಕ್ ಮನಿ ಆರ್ಡರ್ (ಇಎಂಒ) ಪಾವತಿಗಳನ್ನು ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ.
ಶುಕ್ರವಾರ ಸಂವಹನ ಖಾತೆ ಸಚಿವ ರವಿಶಂಕರ್ ಪ್ರಸಾದ್ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ದೃಷ್ಟಿಕೋನವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡುವಂತೆ ಇಂಡಿಯಾ ಪೋಸ್ಟ್ನ ಮುಖ್ಯ ಪೋಸ್ಟ್ ಮಾಸ್ಟರ್ಸ್ ಜನರಲ್ ಮತ್ತು ಹಿರಿಯ ಅಧಿಕಾರಿಗಳಿಗೆ ಸೂಚಿಸಿದರು.
ಕೋವಿಡ್ -19 ಬಿಕ್ಕಟ್ಟಿನ ಸಂದರ್ಭದಲ್ಲಿ ಪೋಸ್ಟಲ್ ವಿಭಾಗದ ಚಟುವಟಿಕೆಗಳು ಮತ್ತು ಪ್ರಯತ್ನಗಳನ್ನು ಪ್ರಸಾದ್ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಪರಿಶೀಲಿಸಿದರು.
ಇಂಡಿಯಾ ಪೋಸ್ಟ್ ಸುಮಾರು 6 ಲಕ್ಷ ಆಹಾರ ಮತ್ತು ಪಡಿತರ ಪ್ಯಾಕೆಟ್ಗಳನ್ನು ಕಾರ್ಮಿಕರಿಗೆ, ಪುರಸಭೆಯ ಕೆಲಸಗಾರರಿಗೆ ಸ್ವಯಂ ಕೊಡುಗೆ ಮೂಲಕ ಮತ್ತು ಎನ್ಜಿಒಗಳ ಸಹಯೋಗದೊಂದಿಗೆ ವಿತರಿಸಿದೆ.
ಸಾಮಾನ್ಯ ಭಾರತೀಯನಿಗೆ ಅಂಚೆ ಕಚೇರಿಗಳ ವ್ಯಾಪಕ ಜಾಲ ಮತ್ತು ತಂತ್ರಜ್ಞಾನದ ಶಕ್ತಿಯು ಆರ್ಥಿಕ ಸೇರ್ಪಡೆ ಮತ್ತು ಬಲವಾದ ಭೌತಿಕ ಪೂರೈಕೆ ಸರಪಳಿಗೆ ಪೂರಕವಾಗಿದೆ ಎಂದು ಸಚಿವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.