ನವದೆಹಲಿ: ಹಿಜ್ಬುಲ್ ಮುಜಾಹಿದೀನ್ ಉಗ್ರ ಸಂಘಟನೆಯ ನಾಯಕ ರಿಯಾಜ್ ನೈಕೋನ ಹತ್ಯೆಗೆ ಪ್ರತೀಕಾರವನ್ನು ತೀರಿಸಿಕೊಳ್ಳಲು ಹಿಜ್ಬುಲ್ ಸಂಘಟನೆ ಹವಣಿಸುತ್ತಿದೆ. ಇದಕ್ಕಾಗಿ, ಜಮ್ಮು ಮತ್ತು ಕಾಶ್ಮೀರದಲ್ಲಿ ದೊಡ್ಡಮಟ್ಟದ ದಾಳಿಯನ್ನು ನಡೆಸಲು ಅದು ಯೋಜನೆಯನ್ನು ರೂಪಿಸುತ್ತಿದೆ ಎಂದು ಗುಪ್ತಚರ ಇಲಾಖೆಯು ಎಚ್ಚರಿಕೆಯನ್ನು ನೀಡಿದೆ ಎಂದು ವರದಿಗಳು ತಿಳಿಸಿವೆ.
ಈ ತಿಂಗಳ ಆರಂಭದಲ್ಲಿ ನೈಕೊನನ್ನು ಭದ್ರತಾಪಡೆಗಳು ಸಂಹಾರ ಮಾಡಿದ್ದವು. ಈತ ಹಿಜ್ಬುಲ್ ಮುಜಾಹಿದೀನ್ ಸಂಘಟನೆಯ ಕಮಾಂಡರ್ ಆಗಿದ್ದ.
ಈತನ ಹತ್ಯೆಗೆ ಪ್ರತೀಕಾರವನ್ನು ತೀರಿಸಿಕೊಳ್ಳಲು ಜಮ್ಮು ಮತ್ತು ಕಾಶ್ಮೀರದಲ್ಲಿ ದೊಡ್ಡಮಟ್ಟದಲ್ಲಿ ನಡೆಸಲು ಯೋಜನೆಯನ್ನು ರೂಪಿಸಲಾಗುತ್ತಿದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.
ಹಿಜ್ಬುಲ್ ಮಾತ್ರವಲ್ಲದೆ ಲಷ್ಕರ್-ಇ-ತೊಯ್ಬಾ ಸೇರಿದಂತೆ ಹಲವು ಸಂಘಟನೆಗಳು ದಾಳಿಯನ್ನು ನಡೆಸಲು ಹೊಂಚು ಹಾಕುತ್ತಿವೆ ಎಂದು ಹೇಳಲಾಗಿದೆ. ಇವುಗಳಿಗೆ ಪಾಕಿಸ್ತಾನದ ಬೆಂಬಲ ಕೂಡ ಇದೆ. ಗಡಿರೇಖೆಯಲ್ಲಿ ಉಗ್ರನನ್ನು ಭಾರತದ ಒಳಗೆ ನುಸುಳಿಸುವ ಪ್ರಯತ್ನವನ್ನು ಪಾಕಿಸ್ತಾನ ನಿರಂತರವಾಗಿ ಮಾಡುತ್ತಲೇ ಇದೆ.
ಗುಪ್ತಚರ ಇಲಾಖೆಯು, ಈಗಾಗಲೇ ಉಗ್ರರ ಹಲವು ಚಟುವಟಿಕೆಗಳ ಮೇಲೆ ನಿಗಾ ಇಟ್ಟಿದೆ. ಹಿಜ್ಬುಲ್ ಸಂಘಟನೆಯು ಉಗ್ರರನ್ನು ಕಾಶ್ಮೀರದಿಂದ ಕಿಸ್ತ್ವಾರಕ್ಕೆ ಸಾಗಣೆ ಮಾಡಿರುವ ಬಗ್ಗೆ ಮಾಹಿತಿ ಲಭಿಸಿದೆ. ಹಿಜ್ಬುಲ್ ಮುಜಾಹಿದೀನ್ ನಾಯಕ ಅಶ್ರಫ್ ಮೌಲ್ವಿ ಅನಂತ್ ನಾಗ್ ನಿಂದ ಕಿಸ್ತ್ವಾರಕ್ಕೆ ಆಗಮಿಸಿದ್ದಾನೆ ಎಂದು ಹೇಳಲಾಗಿದೆ. ಇನ್ನೂ ಐದು ಮಂದಿ ಭಯೋತ್ಪಾದಕರು ಚಟುವಟಿಕೆಗಳನ್ನು ಆರಂಭಿಸಿದ ಬಗ್ಗೆ ಗುಪ್ತಚರ ಇಲಾಖೆಗೆ ಮಾಹಿತಿ ಲಭಿಸಿದೆ. ಹೀಗಾಗಿ ಎಚ್ಚರಿಕೆಯನ್ನು ವಹಿಸುವಂತೆ ಭದ್ರತಾ ಪಡೆಗಳಿಗೆ ಸೂಚನೆ ನೀಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.