ಬೆಂಗಳೂರು: ಇತರ ಇಲಾಖೆಗೆ ಡೆಪ್ಯೂಟಿಗಳಾಗಿ ಹೋಗಿ ಕಾರ್ಯ ನಿರ್ವಹಿಸುತ್ತಿರುವ ಸಹಕಾರಿ ಇಲಾಖೆಯ ಅಧಿಕಾರಿಗಳನ್ನು ಮತ್ತೆ ಮಾತೃ ಸಂಸ್ಥೆಗಳಿಗೆ ಕರೆತರುವ ಕೆಲಸಕ್ಕೆ ಇದೀಗ ರಾಜ್ಯ ಸರ್ಕಾರ ಮುಂದಾಗಿದೆ.
ಸಹಕಾರ ಇಲಾಖೆ ಮತ್ತು ಲೆಕ್ಕ ಪರಿಶೋಧನೆಗಾಗಿ ನೇಮಕಗೊಂಡಿದ್ದ ಅಧಿಕಾರಿಗಳು ತಮ್ಮ ಇಲಾಖೆಯಲ್ಲಿ ಹೆಚ್ಚುವರಿ ಕಾರ್ಯದೊತ್ತಡ ಇಲ್ಲದ ಕಾರಣ ಬೇರೆ ಇಲಾಖೆಗೆ ಸರ್ಕಾರದಿಂದಲೆ ನಿಯೋಜಿಸಲ್ಪಟ್ಟವರು ಅಥವಾ ತಾವಾಗಿಯೇ ಸ್ವ ಇಚ್ಛೆಯಿಂದ ಹೋದವರು ಕೆಲಸ ಮಾಡುತ್ತಿದ್ದಾರೆ. ಇದರಿಂದ ಇಲಾಖೆಯಲ್ಲಿ ಹೆಸರಿಗೆ ಹುದ್ದೆಗಳು ಭರ್ತಿಯಾಗಿದ್ದರೂ, ಕಾರ್ಯ ನಿರ್ವಹಿಸಲು ಸಿಬ್ಬಂದಿ ಗಳಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಸರ್ಕಾರ ಈ ಮಹತ್ವದ ಬದಲಾವಣೆಗೆ ತೊಡಗಿಕೊಂಡಿದೆ ಎಂದು ಸಹಕಾರ ಸಚಿವ ಎಸ್. ಟಿ. ಸೋಮಶೇಖರ್ ಅವರು ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.
ಬಿಬಿಎಂಪಿ, ವಿವಿಧ ಜಿಲ್ಲೆಗಳ ಕೌಶಲಾಭಿವೃದ್ಧಿ ಇಲಾಖೆ, ಜಿಲ್ಲಾ ಪಂಚಾಯತ್ಗಳು ಸೇರಿದಂತೆ ಇನ್ನಿತರ ಇಲಾಖೆಗಳು ಸೇರಿದಂತೆ ಇನ್ನಿತರ ಇಲಾಖೆಗಳಿಗೆ ಅಧಿಕಾರಿಗಳು ಆಯಕಟ್ಟಿನ ಜಾಗ ಹುಡುಕಿಕೊಂಡು ಡೆಪ್ಯುಟಿ ಮಾಡಿಸಿಕೊಂಡು, ಇಂದಿಗೂ ಅಲ್ಲೇ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರನ್ನು ಮತ್ತೆ ಸಹಕಾರ ಇಲಾಖೆಗೆ ಕರೆತರುವುದಾಗಿಯೂ ಸಚಿವರು ತಿಳಿಸಿದ್ದು, ಈ ಕುರಿತಂತೆ ಪತ್ರವನ್ನೂ ಬರೆದಿದ್ದಾರೆ. ಸಹಕಾರ ಇಲಾಖೆ ಚುರುಕಾಗಿ ಕಾರ್ಯ ನಿರ್ವಹಿಸುತ್ತಿದ್ದರೂ, ಸಿಬ್ಬಂದಿ ಕೊರತೆ ಕಾಣುತ್ತಿದೆ. ಇದರಿಃದ ನಿಗದಿತ ಸಮಯದಲ್ಲಿ ಕಾರ್ಯ ನಿರ್ವಹಿಸುವುದು ಕಷ್ಟವಾಗುತ್ತಿದ್ದು, ಇದು ಸಮಸ್ಯೆಯಾಗಿ ಪರಿಣಮಿಸಿದೆ ಎಂಬ ವಿಚಾರ ಅಧಿಕಾರಿಗಳೊಂದಿಗಿನ ಸಭೆಯ ಸಂದರ್ಭ ಗಮನಕ್ಕೆ ಬಂದಿರುತ್ತದೆ. ಈ ಬಗ್ಗೆ ವರದಿ ಸಲ್ಲಿಸುವಂತೆಯೂ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಈ ವಿಚಾರವನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಗಮನಕ್ಕೂ ತರಲಾಗಿದ್ದು, ಈ ಸಮಸ್ಯೆಯನ್ನು ಶೀಘ್ರವೇ ಸರಿಪಡಿಸಿಕೊಳ್ಳುವಂತೆ ತಿಳಿಸಿದ್ದಾರೆ. ಅಲ್ಲದೆ ಅಧಿಕಾರಿಗಳನ್ನು ಮಾತೃ ಸಂಸ್ಥೆಗೆ ಮತ್ತೆ ಕರೆತಂದು ಕರ್ತವ್ಯ ನಿರ್ವಹಿಸುವಂತೆ ಮಾಡಬೇಕೆಂದು ಸೂಚಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಆ ಮೂಲಕ ಇಲಾಖೆಯನ್ನು ಮತ್ತಷ್ಟು ಬಲ ಪಡಿಸಬೇಕಾಗಿದೆ ಎಂದೂ ಸೋಮಶೇಖರ್ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.