ನವದೆಹಲಿ: ಕೇಂದ್ರ ಸಚಿವ ಪಿಯುಶ್ ಗೋಯಲ್ ಅವರು ಮಂಗಳವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ ಮತ್ತು ಮಹಾರಾಷ್ಟ್ರ ಸರಕಾರದ ಸಂಪೂರ್ಣ ವ್ಯವಸ್ಥೆ ಕುಸಿದಿದೆ ಎಂದು ಆರೋಪಿಸಿದ್ದಾರೆ.
“ಸಾಕಷ್ಟು ಸಂಖ್ಯೆಯ ರೈಲುಗಳನ್ನು ರಾಜ್ಯಕ್ಕೆ ಕಳುಹಿಸಿಕೊಡಲಾಗಿಲ್ಲ ಎಂದು ಮಹಾರಾಷ್ಟ್ರ ಸರಕಾರ ಆರೋಪ ಮಾಡುತ್ತಿದೆ. ಆದರೆ ಮಹಾರಾಷ್ಟ್ರ ಸರಕಾರದ ಸಂಪೂರ್ಣ ವ್ಯವಸ್ಥೆಯೇ ಕುಸಿದು ಬಿದ್ದಿದೆ. ಇಂತಹ ಸಂದರ್ಭದಲ್ಲಿ ಅದು ಕೇಂದ್ರ ಸರ್ಕಾರದ ಮೇಲೆ ಆರೋಪ ಹೊರಿಸುವುದು ದುರಾದೃಷ್ಟಕರ ಎಂದು ಗೋಯಲ್ ಹೇಳಿದ್ದಾರೆ.
80 ರೈಲುಗಳಿಗೆ ಬೇಡಿಕೆಯಿಟ್ಟರೂ ರೈಲ್ವೆ ಸಚಿವಾಲಯ ಕೇವಲ 30ರಿಂದ 40 ರೈಲುಗಳನ್ನು ಕಳುಹಿಸಿಕೊಟ್ಟಿದೆ ಎಂದು ಉದ್ಧವ್ ಠಾಕ್ರೆ ಸರಕಾರ ಆರೋಪ ಮಾಡಿದೆ. ಇದಕ್ಕೆ ಪ್ರತ್ಯುತ್ತರ ನೀಡಿರುವ ಗೋಯಲ್, ಮಹಾರಾಷ್ಟ್ರಕ್ಕೆ 65 ರೈಲುಗಳನ್ನು ಕಳುಹಿಸಲಾಗಿದೆ, ಆದರೆ ನಿಗದಿತ ವೇಳೆಗೆ ಜನರನ್ನು ರೈಲಿಗೆ ಕರೆ ತರಲು ಸರಕಾರ ವಿಫಲವಾಗಿದೆ ಎಂದಿದ್ದಾರೆ.
ಮಹಾರಾಷ್ಟ್ರ ಸರಕಾರವು ಇನ್ನೂ ಸಾಕಷ್ಟು ಪರಿಶ್ರಮ ಪಟ್ಟು ಕೆಲಸ ಮಾಡಬೇಕಿದೆ ಮತ್ತು ಪರಿಸ್ಥಿತಿಯನ್ನು ತನ್ನ ಹತೋಟಿಗೆ ತಂದುಕೊಳ್ಳಬೇಕಿದೆ ಎಂದು ಅವರು ಕಿವಿಮಾತು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.