ನವದೆಹಲಿ: ದೇಶದೆಲ್ಲೆಡೆ ಕೊರೋನಾ ಸೋಂಕು ಹೆಚ್ಚು ವ್ಯಾಪಿಸಲು ಕಾರಣವೆಂದೇ ನಂಬಲಾದ ದೆಹಲಿಯ ನಿಜಾಮುದ್ದೀನ್ ಮರ್ಕಜ್ನ ತಬ್ಲಿಘಿ ಸಮಾವೇಷದಲ್ಲಿ ಭಾಗಿಯಾದ 83 ವಿದೇಶಿ ಸದಸ್ಯರ ವಿರುದ್ಧ ದೆಹಲಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ದೆಹಲಿಯ ಸಾಕೇತ್ ಕೋರ್ಟ್ನಲ್ಲಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.
ಇವರಲ್ಲಿ ಸೌದಿ ಅರೇಬಿಯಾದ 10 ಮಂದಿ ಮತ್ತು ಬ್ರೆಜಿಲ್ನ 8 ಮಂದಿ ಸೇರಿದಂತೆ ಇನ್ನೂ ಅನೇಕ ವಿದೇಶೀ ರಾಷ್ಟ್ರಗಳಿಗೆ ಸಂಬಂಧಿಸಿದವರ ವಿರುದ್ಧ ಈ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಕೊರೋನಾ ಕಾರಣದಿಂದ ಗುಂಪು ಸಭೆ, ಧಾರ್ಮಿಕ ಕಾರ್ಯಕ್ರಮ ನಡೆಸುವಂತಿಲ್ಲ ಎಂಬ ಕಾನೂನು ಜಾರಿಯಲ್ಲಿದ್ದರೂ, ನಿಯಮ ಉಲ್ಲಂಘನೆ ಮಾಡಿದ ಆರೋಪವನ್ನು ಈ ತಬ್ಲಿಘಿ ಸದಸ್ಯರು ಎದುರಿಸುತ್ತಿದ್ದಾರೆ.
ಈ ಸಭೆಯಲ್ಲಿ ಭಾಗವಹಿಸಿದ್ದ ಸುಮಾರು 700 ವಿದೇಶಿಗರಿಗೆ ಸಂಬಂಧಿಸಿದಂತೆ ದೆಹಲಿಯ ಕ್ರೈಂ ಬ್ರಾಂಚ್ ಪೊಲೀಸರು ಮಹತ್ವದ ದಾಖಲೆಗಳನ್ನು ಮೇ ಮೊದಲ ವಾರದಲ್ಲಿಯೇ ವಶಕ್ಕೆ ತೆಗೆದುಕೊಂಡು ತನಿಖೆ ನಡೆಸುತ್ತಿದ್ದಾರೆ. ವಿದೇಶಿಗರ ಪಾಸ್ಪೋರ್ಟ್ಗಳನ್ನು ಸಹ ಮಟ್ಟಗೋಲು ಹಾಕಲಾಗಿತ್ತು. ಪೊಲೀಸರು ವಶಕ್ಕೆ ಪಡೆದುಕೊಂಡಿದ್ದ ಪಾಸ್ಪೋರ್ಟ್ಗಳ ಎಲ್ಲಾ ಜಮಾತ್ನ ಸದಸ್ಯರೂ ದೆಹಲಿಯಲ್ಲಿ ನಡೆದಿದ್ದ ತಬ್ಲಿಘಿ ಸಮಾವೇಶದಲ್ಲಿ ಭಾಗವಹಿಸಿದ್ದರು ಎಂಬುದಾಗಿಯೂ ಮೂಲಗಳು ಮಾಹಿತಿ ನೀಡಿವೆ.
ಈ ಹಿಂದೆ ತಬ್ಲಿಘಿ ಜಮಾತ್ನ ಮುಖ್ಯಸ್ಥ ಮೌಲಾನಾ ಸಾದ್ನ ಪುತ್ರನನ್ನು ವಶಕ್ಕೆ ಪಡೆದುಕೊಂಡು ತನಿಖೆ ನಡೆಸಿದ್ದ ಪೊಲೀಸರಿಗೆ, ಈ ಸಭೆಯಲ್ಲಿ ಭಾಗವಹಿಸಿದ್ದ ಸುಮಾರು 20 ತಬ್ಲಿಘಿ ಸದಸ್ಯರ ಕುರಿತಂತೆ ಮಾಹಿತಿ ದೊರಕಿತ್ತು. ಇದೇ ಆಧಾರದಲ್ಲಿ ತನಿಖೆ ಮುಂದುವರೆಸಿದ್ದ ಪೊಲೀಸರು ಇದೀಗ ವಿದೇಶೀ ಸದಸ್ಯರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ದೇಶದೆಲ್ಲೆಡೆ ಕೊರೋನಾ ವ್ಯಾಪಿಸಲು 30% ದಷ್ಟು ಕಾರಣ ದೆಹಲಿಯ ತಬ್ಲಿಘಿ ಸಭೆಯೇ ಎಂದು ಸರ್ಕಾರ ವರದಿಯಲ್ಲಿ ತಿಳಿಸಿದೆ. ಈ ಸಭೆಯಲ್ಲಿ ಭಾರತೀಯರ ಜೊತೆಗೆ ಸುಮಾರು 47 ರಾಷ್ಟ್ರಗಳ ಸದಸ್ಯರು ಭಾಗವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.