ನವದೆಹಲಿ: ಕೋವಿಡ್-19 ಸೋಂಕಿನ ಹರಡುವಿಕೆಯನ್ನು ತಡೆಗಟ್ಟಲು ಕೈಗಳ ನೈರ್ಮಲ್ಯ ಮತ್ತು ಸಾಮಾಜಿಕ ಅಂತರ ಪಾಲಿಸುವ ರೂಢಿಗಳನ್ನು ಅನುಸರಿಸುವ ತನ್ನ ಮನವಿಯನ್ನು ಆರೋಗ್ಯ ಸಚಿವಾಲಯ ಪುನರುಚ್ಚರಿಸಿದೆ.
ಸರಣಿ ಟ್ವೀಟ್ಗಳನ್ನು ಮಾಡಿರುವ ಸಚಿವಾಲಯ, ಹೊಸ ರೂಢಿಯ ಭಾಗವಾಗಿ ಜನರು ಯಾವಾಗಲೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ವಿಡುವ ರೂಢಿಗಳನ್ನು ಅನುಸರಿಸಬೇಕು ಮತ್ತು ಸೋಪ್ ಮತ್ತು ನೀರಿನಿಂದ ಕೈ ತೊಳೆಯಬೇಕು ಅಥವಾ ಆಲ್ಕೋಹಾಲ್ ಆಧಾರಿತ ಹ್ಯಾಂಡ್ ಸ್ಯಾನಿಟೈಜರ್ ಬಳಸಬೇಕು ಎಂದು ಸಚಿವಾಲಯ ಒತ್ತಿಹೇಳಿದೆ.
ಸಚಿವಾಲಯವು ಸಾರ್ವಜನಿಕವಾಗಿ ಉಗುಳುವುದು ಶಿಕ್ಷಾರ್ಹ ಅಪರಾಧವಾಗಿದೆ ಮತ್ತು ಇದು ಕೊರೋನವೈರಸ್ ಹರಡುವ ಅಪಾಯವನ್ನು ಹೆಚ್ಚಿಸುತ್ತದೆ ಎಂದಿದೆ. ತಮ್ಮನ್ನು ರಕ್ಷಿಸಿಕೊಳ್ಳಲು ಮತ್ತು ಕರೋನಾ ಸರಪಳಿಯನ್ನು ಮುರಿಯಲು ಮುಖಗವಸು ಧರಿಸುವಂತೆ ಆರೋಗ್ಯ ಸಚಿವಾಲಯ ಜನರಿಗೆ ಒತ್ತಿ ಹೇಳಿದೆ ಎಂದು ವರದಿಗಳು ತಿಳಿಸಿವೆ.
ಒಂದು ವೇಳೆ ಕೊರೋನಾ ರೋಗಲಕ್ಷಣಗಳು ಕಾಣಿಸಿಕೊಂಡರೆ ಜನರು ತಕ್ಷಣ ಈ ಬಗ್ಗೆ ಮಾಹಿತಿಯನ್ನು ಹಂಚಿಕೊಳ್ಳಬೇಕು ಎಂದಿದೆ.
ತಾತ್ಸಾರಕ್ಕೆ ಒಳಗಾಗುವ ಭಯದಿಂದ ಜನರು ತಕ್ಷಣ ಸಹಾಯ ಪಡೆಯಲು ಮುಂದಾಗದೇ ಇದ್ದರೆ ಹೆಚ್ಚು ತೀವ್ರವಾದ ಆರೋಗ್ಯ ಸಮಸ್ಯೆಗಳು ಎದುರಾಗಬಹುದುಎಂದು ಎಚ್ಚರಿಸಿದೆ.
ಪ್ರತಿಯೊಬ್ಬರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಎರಡು ಅಡಿಗಳ ಅಂತರವನ್ನು ನಿರ್ವಹಿಸುವುದು ಮುಖ್ಯವಾಗಿದೆ. ಜನರು ಕೈ, ಮೂಗು ಮತ್ತು ಬಾಯಿಯನ್ನು ಮುಟ್ಟುವುದನ್ನು ತಪ್ಪಿಸಬೇಕು ಎಂದು ಆರೋಗ್ಯ ಸಚಿವಾಲಯ ಹೇಳಿದೆ.
ಹೊಗೆರಹಿತ ತಂಬಾಕು ಉತ್ಪನ್ನಗಳನ್ನು ಸೇವಿಸುವುದರಿಂದ ಮತ್ತು ಉಗುಳುವುದರಿಂದ ಜನರು ದೂರವಿರಬೇಕು. ಇದರಿಂದ ಮೂಲಭೂತ ನೈರ್ಮಲ್ಯದ ಮಟ್ಟವನ್ನು ಸುಧಾರಿಸಬಹುದು ಮತ್ತು ಕೊರೋನವೈರಸ್ ಹರಡುವುದನ್ನು ತಡೆಯಬಹುದು ಎಂದಿದೆ.
ಜ್ವರ, ಕೆಮ್ಮು ಮತ್ತು ಉಸಿರಾಟದ ತೊಂದರೆ ಮುಂತಾದ ರೋಗಲಕ್ಷಣಗಳು ಯಾರಿಗಾದರು ಕಾಣಿಸಿಕೊಂಡರೆ, ಅವರು ತಕ್ಷಣ ಆಲ್ ಇಂಡಿಯಾ ಸಹಾಯವಾಣಿ ಸಂಖ್ಯೆ 1075 ಗೆ ಕರೆ ಮಾಡಬೇಕು ಎಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.