ಬೆಂಗಳೂರು: ಕೊರೋನಾ ಲಾಕ್ಡೌನ್ನಿಂದಾಗಿ ಶೈಕ್ಷಣಿಕವಾಗಿಯೂ ವಿದ್ಯಾರ್ಥಿಗಳು ಅನೇಕ ತೊಂದರೆಗಳನ್ನು ಅನುಭವಿಸುವಂತಾಗಿದೆ. ಲಾಕ್ಡೌನ್ನಿಂದಾಗಿ ಬಾಕಿ ಉಳಿದಿರುವ ಶೈಕ್ಷಣಿಕ ವಿಚಾರಗಳನ್ನು ಪೂರ್ಣಗೊಳಿಸುವ ಹಿನ್ನೆಲೆಯಲ್ಲಿ ಕಾಲೇಜು, ಯೂನಿವರ್ಸಿಟಿಯ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆಯನ್ನು ರದ್ದುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
2020-2021 ನೇ ಸಾಲಿನಲ್ಲಿನ ಬೇಸಿಗೆ ರಜೆಯನ್ನು ಕಡಿತ ಮಾಡಿರುವುದಾಗಿ ಸರ್ಕಾರ ಮಾಹಿತಿ ನೀಡಿದೆ. ಲಾಕ್ಡೌನ್ನಿಂದಾಗಿ ಈಗಾಗಲೇ ಎರಡು ತಿಂಗಳಿಗೂ ಅಧಿಕ ಸಮಯದಿಂದ ತರಗತಿಗಳು ನಡೆಯುತ್ತಿಲ್ಲ. ಇದರಿಂದಾಗಿ ಪಾಠ ಪ್ರವಚನಗಳು ಪೂರ್ಣಗೊಳಿಸಲಾಗಿಲ್ಲವಾದ್ದರಿಂದ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಈ ಬದಲಾವಣೆಗೆ ಮುಂದಾಗಿರುವುದಾಗಿಯೂ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.
ಈ ಶೈಕ್ಷಣಿಕ ವರ್ಷದಲ್ಲಿ ಕೊರೋನಾ ಸಾಂಕ್ರಾಮಿಕ ರೋಗದಿಂದಾಗಿ ಶೈಕ್ಷಣಿಕ ವಿಚಾರದಲ್ಲಿ ವ್ಯತ್ಯಯವಾಗಿದೆ. ಆದ್ದರಿಂದ ಉನ್ನತ ಶಿಕ್ಷಣ ಇಲಾಖೆ 2020-21 ನೇ ಶೈಕ್ಷಣಿಕ ವರ್ಷದಲ್ಲಿ ಝೀರೋ ವೆಕೇಷನ್ (ಶೂನ್ಯ ರಜಾವಧಿ) ಗೆ ಮುಂದಾಗಿರುವುದಾಗಿ ತಿಳಿದು ಬಂದಿದೆ. ರಾಜ್ಯದ ಬೇರೆ ಬೇರೆ ಶಿಕ್ಷಣ ಸಂಸ್ಥೆಗಳ ವೈಸ್ ಚಾನ್ಸಿಲರ್ಗಳ ಜೊತೆಗೆ ಚರ್ಚಿಸಿದ ಬಳಿಕ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.