ಬೆಂಗಳೂರು: ದೇಶ ಕೊರೋನಾ ಲಾಕ್ಡೌನ್ನಿಂದಾಗಿ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗಿದೆ. ರೈತರಂತೂ ತಾವು ಬೆಳೆದ ಬೆಳೆಗೆ ಸರಿಯಾಗಿ ಮಾರುಕಟ್ಟೆ ಸಿಗದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಸದ್ಯ ಮಾವಿನ ಸೀಜನ್ ಆಗಿದ್ದು, ಮಾವಿನ ಹಣ್ಣು ಬೆಳೆದ ಬೆಳೆಗಾರರು, ಅದನ್ನು ಗ್ರಾಹಕರಿಗೆ ತಲುಪಿಸಲಾಗದೆ, ಇತ್ತ ಸರಿಯಾದ ಆದಾಯವೂ ಇಲ್ಲದೆ ತಲೆಗೆ ಕೈ ಹೊತ್ತು ಕೂರುವಂತಾಗಿದೆ.
ಮಾವಿನ ಹಣ್ಣು ಬೆಳೆಗಾರರ ಸಮಸ್ಯೆಗೆ ಒಂದು ಪರಿಹಾರವನ್ನು ನೀಡಲು ಮುಂದಾಗಿರುವ ರಾಜ್ಯ ಸರ್ಕಾರ, ಹಣ್ಣುಗಳನ್ನು ಆನ್ಲೈನ್ ಮಾರಾಟಕ್ಕೆ ಬೇಕಾದ ಪೂರಕ ಕ್ರಮಗಳನ್ನು ರೂಪಿಸಿದೆ. ಫ್ಲಿಪ್ಕಾರ್ಟ್ ಅನ್ನು ಬಳಕೆ ಮಾಡಿಕೊಂಡು ರಾಜ್ಯದ ಮಾವು ಬೆಳೆಗಾರರು ಬೆಳೆದ ಮಾವಿನ ಹಣ್ಣುಗಳನ್ನು ಗ್ರಾಹಕರ ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿಯೂ ಕಾರ್ಯ ಯೋಜನೆಗಳನ್ನು ಹಾಕಿಕೊಂಡಿದೆ.
ಈ ಕುರಿತಂತೆ ತೋಟಗಾರಿಕಾ ಸಚಿವ ನಾರಾಯಣ ಗೌಡ ಮಾಹಿತಿ ನೀಡಿದ್ದು, ಪ್ರಾಯೋಗಿಕವಾಗಿ ಮಾವಿನ ಹಣ್ಣುಗಳನ್ನು ಆನ್ಲೈನ್ ಮಾರಾಟ ಮಾಡಲಾಗುತ್ತಿದ್ದು, ಇದು ಯಶಸ್ವಿಯಾದಲ್ಲಿ ಮುಂದಿನ ದಿನಗಳಲ್ಲಿ ಇತರ ಹಣ್ಣುಗಳಿಗೂ ಆನ್ಲೈನ್ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ಯೋಚಿಸಲಾಗುವುದಾಗಿ ತಿಳಿಸಿದ್ದಾರೆ. ಅಲ್ಲದೆ ಫ್ಲಿಪ್ಕಾರ್ಟ್ ಮೂಲಕ ಮಾರಾಟವಾಗುವ ಹಣ್ಣಿನ ದರವನ್ನು ಸಹಿತ ಬೆಳೆಗಾರನೇ ನೇರವಾಗಿ ನಿರ್ಧರಿಸುವುದಾಗಿಯೂ ಸಚಿವರು ಮಾಹಿತಿ ನೀಡಿದ್ದಾರೆ.
ಜೊತೆಗೆ ಪ್ರತಿ ಜಿಲ್ಲೆಯಲ್ಲಿಯೂ ಮಾವು ಮಾರಾಟ ಕೇಂದ್ರಗಳನ್ನು ಆರಂಭ ಮಾಡುವ ಚಿಂತನೆ ಇರುವವುದಾಗಿಯೂ ಸಚಿವರು ತಿಳಿಸಿದ್ದಾರೆ. ಈ ಹಿಂದೆ ಮಾವಿನ ಹಣ್ಣುಗಳ ಮಾರಾಟ ಮೌಲ್ಯವನ್ನು ಎಪಿಎಂಸಿ ನಿರ್ಧಾರ ಮಾಡುತ್ತಿತ್ತು. ಆದರೆ ಮುಂದಿನ ದಿನಗಳಲ್ಲಿ ರೈತರೇ ಬೆಲೆ ನಿಗದಿ ಮಾಡಲಿದ್ದಾರೆ ಎಂದೂ ಅವರು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.