ಬೆಂಗಳೂರು: ನಗರದ ಯಲಹಂಕದಲ್ಲಿ 34 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಮೇಲ್ಸೇತುವೆಯನ್ನು ನಾಳೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಉದ್ಘಾಟಿಸಲಿದ್ದಾರೆ. ಈ ಮೇಲ್ಸೇತುವೆಗೆ ‘ವೀರ ಸಾವರ್ಕರ್’ ಅವರ ಹೆಸರಿಡಲಾಗುತ್ತಿದೆ, ನಾಳೆ ಸಾರ್ವಜನಿಕ ಸಂಚಾರಕ್ಕೆ ತೆರೆದುಕೊಳ್ಳಲಿದೆ.
ಈ ಕಾಮಗಾರಿ ಕಳೆದ ಮೂರು ವರ್ಷದಿಂದ ನಡೆಸಲಾಗುತ್ತಿದ್ದು, ಇದೀಗ ಪೂರ್ಣಗೊಂಡಿದೆ. ಯಶವಂತಪುರ ಮಾರ್ಗವಾಗಿ ಯಲಹಂಕ, ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಚಾರ ದಟ್ಟಣೆ ಇಲ್ಲದೆ ತೆರಳುವುದಕ್ಕೆ ಈ ಚತುಷ್ಪಥ ಮೇಲ್ಸೇತುವೆ ಸಹಾಯ ಮಾಡಲಿದೆ.
ಈ ಮೇಲ್ಸೇತುವೆಯ ಕೆಳಗೆ ರಸ್ತೆಯನ್ನೂ ನಿರ್ಮಿಸಲಾಗಿದ್ದು, ನಗರೋತ್ಥಾನ ಯೋಜನೆಯ ಅಡಿಯಲ್ಲಿ ಈ ಮೇಲ್ಸೇತುವೆ ಕಾಮಗಾರಿ ನಡೆಸಲಾಗಿದೆ. ಇದು ವಿಮಾನ ನಿಲ್ದಾಣಕ್ಕೆ ಪರ್ಯಾಯ ರಸ್ತೆಯಾಗಿಯೂ ಬಳಕೆಯಾಗಲಿದೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.
ನಾಳೆ ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಅವರ ಜನ್ಮ ದಿನವಾಗಿದ್ದು, ಈ ದಿನದಂದೇ ಮುಖ್ಯಮಂತ್ರಿ ಯಡಿಯೂರಪ್ಪ ಸಾವರ್ಕರ್ ಹೆಸರಿನ ಮೇಲ್ಸೇತುವೆ ಲೋಕಾರ್ಪಣೆ ಮಾಡುವ ಮೂಲಕ ಅವರಿಗೆ ಗೌರವ ಸಮರ್ಪಿಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.