ಬೆಂಗಳೂರು: ರಾಜ್ಯದ ಎಲ್ಲಾ ಜನರಿಗೂ ಗುಣಮಟ್ಟದ ಆರೋಗ್ಯ ರಕ್ಷಣಾ ಕ್ರಮವನ್ನು ಸಮರ್ಥವಾಗಿ ತಲುಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ರಾಜ್ಯವ್ಯಾಪಿ ಆರೋಗ್ಯ ನೋಂದಣಿ ಅಥವಾ ಹೆಲ್ತ್ ರಿಜಿಸ್ಟ್ರೇಶನ್ ವ್ಯವಸ್ಥೆ ಆರಂಭಿಸಿದೆ. ಈಗಾಗಲೇ ಇದನ್ನು ಪ್ರಾಯೋಗಿಕವಾಗಿಯೂ ಕಾರ್ಯರೂಪಕ್ಕೆ ತರಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.
ಈ ಬಗ್ಗೆ ಸರ್ಕಾರಿ ಮತ್ತು ಖಾಸಗಿ ವಲಯದ ಆರೋಗ್ಯ ತಜ್ಞರ ಜೊತೆಗೆ ಮಾತುಕತೆ ನಡೆಸಿ ದ ಸುಧಾಕರ್, ಇದನ್ನು ಆರಂಭಿಕ ಹಂತದಲ್ಲಿ ಚಿಕ್ಕಬಳ್ಳಾಪುರ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅನುಷ್ಠಾನ ಮಾಡಲಾಗುತ್ತದೆ. ಇದು ರಾಜ್ಯದ ಜನರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಕೈಗೊಂಡಿರುವ ಮಹತ್ವದ ಕ್ರಮವಾಗಿದೆ. ಆರೋಗ್ಯ ಕ್ಷೇತ್ರದಲ್ಲಿ ಸರ್ಕಾರ ಜಾರಿ ಮಾಡುತ್ತಿರುವ ಪ್ರತಿಯೊಂದು ಸೌಲಭ್ಯವೂ ಸಮಾಜದ ಕಟ್ಟ ಕಡೆಯ ವ್ಯಕ್ತಿಯನ್ನು ತಲುಪಬೇಕು ಎಂಬ ಆಶಯದೊಂದಿಗೆ ಇದಕ್ಕೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದ ಜನರ ಆರೋಗ್ಯ ಸಮೀಕ್ಷೆಯ ಜವಾಬ್ದಾರಿಯನ್ನು ಪ್ರಾಥಮಿಕ ಆರೋಗ್ಯ ಕೇಂದ್ರ ದ ಸಿಬ್ಬಂದಿಗಳು, ಕಂದಾಯ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು ಮತ್ತು ಆಶಾ ಕಾರ್ಯಕರ್ತರಿಗೆ ನೀಡಲಾಗಿದ್ದು, ಅವರು ಮನೆ ಮನೆಗೆ ತೆರಳಿ ಜನರ ಆರೋಗು ಮಾಹಿತಿಯನ್ನು ಸಂಗ್ರಹಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ. ಇದರಿಂದಾಗಿ ಜನರ ಆರೋಗ್ಯದ ಸಮರ್ಥ ಕಾಳಜಿ, ಸರ್ಕಾರದ ಸೌಲಭ್ಯಗಳನ್ನು ಸರಿಯಾಗಿ ಜನರಿಗೆ ತಲುಪುವಂತೆ ಮಾಡುವುದು, ಸರ್ಕಾರದ ವಿವಿಧ ನಾಗರಿಕ ಕೇಂದ್ರಿತ ಯೋಜನೆಗಳನ್ನು ಸರಿಯಾದ ಅನುಷ್ಠಾನಕ್ಕೂ ಸಹಾಯ ಮಾಡುತ್ತದೆ ಎಂಬುದಾಗಿ ಸುಧಾಕರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕೊರೋನಾ ಸಂಕಷ್ಟದಿಂದಾಗಿ ಸದ್ಯ ಎದುರಿಸುತ್ತಿರುವ ಸಮಸ್ಯೆಗಳ ಅನುಭವವೇ ಹೆಲ್ತ್ ರಿಜಿಸ್ಟ್ರೇಶನ್ ನ ಅಗತ್ಯತೆಯನ್ನು ಮನದಟ್ಟು ಮಾಡಿದೆ. ಆದ್ದರಿಂದ ಸರ್ಕಾರ ರಾಜ್ಯದ ಪ್ರತಿಯೊಬ್ಬ ಪ್ರಜೆಯ ಆರೋಗ್ಯ ದತ್ತಾಂಶಗಳನ್ನು ಸಂಗ್ರಹಿಸಲು ಮುಂದಾಗಿದೆ ಎಂದೂ ಅವರು ತಿಳಿಸಿದ್ದಾರೆ. ಅಲ್ಲದೆ ರಾಜ್ಯದ ಪ್ರತಿಯೊಬ್ಬರಿಗೂ ವಿಶ್ವಮಟ್ಟದ ಆರೋಗ್ಯ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಹೆಲ್ತ್ ರಿಜಿಸ್ಟ್ರೇಶನ್ ಕ್ರಮವನ್ನು ಅನುಸರಿಸಲಾಗುವುದಾಗಿಯೂ ಸಚಿವರು ಮಾಹಿತಿ ನೀಡಿದ್ದಾರೆ.
With a vision to efficiently deliver quality healthacare to every citizen, Karnataka will soon have Statewide Health Register. The pilot project will be implemented in Chikkaballapura & Dakshina Kannada dist shortly and completed in 3-4 months. @CMofKarnataka @PMOIndia @JPNadda pic.twitter.com/iS4Hke5Rlf
— Dr Sudhakar K (@mla_sudhakar) May 27, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.