ಪುಲ್ವಾಮಾ: ಪುಲ್ವಾಮಾ ಘಟನೆ ಭಾರತೀಯರ ಮನದಲ್ಲಿ ಇನ್ನೂ ಹಚ್ಚಹಸಿರಾಗಿರುವಾಗಲೇ, ಮತ್ತೆ ಪುಲ್ವಾಮಾದಲ್ಲಿಯೇ ಉಗ್ರರು ಇಂತಹದ್ದೇ ಮತ್ತೊಂದು ಕೃತ್ಯಕ್ಕೆ ಮುಂದಾಗಿದ್ದು ಸಿಆರ್ಪಿಎಫ್, ಪುಲ್ವಾಮಾ ಪೊಲೀಸ್ ಮತ್ತು ಜಮ್ಮು ಕಾಶ್ಮೀರದ ಪೊಲೀಸರು ನಡೆಸಿದ ಸಮಯೋಚಿತ ಕಾರ್ಯಾಚರಣೆಯಿಂದ ಭಾರೀ ಅನಾಹುತವೊಂದು ತಪ್ಪಿದೆ.
ಮೂಲಗಳ ಪ್ರಕಾರ, ಭಯೋತ್ಪಾದಕ ಚಟುವಟಿಕೆಗಳು ನಡೆಯುವ ಮಾಹಿತಿಯನ್ನು ಗುಪ್ತಚರ ಇಲಾಖೆಯಿಂದ ಪಡೆದುಕೊಂಡಿದ್ದ ಭದ್ರತಾ ಪಡೆಗಳು ಆ ನಿಟ್ಟಿನಲ್ಲಿ ಕಠಿಣ ಕಾರ್ಯಾಒರಣೆ ನಡೆಸಿದ್ದವು. ಪುಲ್ವಾಮ ಚೆಕ್ ಪೋಸ್ಟ್ಗಳಲ್ಲಿಯೂ ಉನ್ನತ ಮಟ್ಟದಲ್ಲಿ ಕಾರ್ಯಾಚರಣೆಗಳನ್ನು ಕೈಗೊಳ್ಳಲಾಗಿತ್ತು. ಭದ್ರತಾ ಪಡೆಗಳ ತಪಾಸಣೆ ವೇಳೆ ಬಿಳಿ ಬಣ್ಣದ ಸ್ಯಾಂಟ್ರೋ ಕಾರ್ ಒಂದು ಬ್ಯಾರಿಕೇಡ್ಗಳನ್ನು ತಳ್ಳಿಕೊಂಡು ಚಲಿಸಿದೆ. ಕೂಡಲೇ ಭದ್ರತಾ ಪಡೆಗಳು ಕಾರ್ ಅನ್ನು ಹಿಂಬಾಲಿಸಿದ್ದು, ಕೊಂಚ ದೂರ ಹೋಗಿ ಕಾರಿನ ಚಾಲಕ ಕಾರನ್ನು ಅರ್ಧ ದಾರಿಯಲ್ಲಿ ಬಿಟ್ಟು ಪರಾರಿಯಾಗಿದ್ದಾನೆ.
#WATCH J&K: In-situ explosion of the vehicle, which was carrying IED, by Police in Pulwama.
Major incident of vehicle-borne IED explosion was averted by Police, CRPF & Army after Pulwama Police got credible info last night that a terrorist was moving with an explosive-laden car pic.twitter.com/UnUHSYB07C
— ANI (@ANI) May 28, 2020
ಈ ಕಾರಿನ ನೋಂದಣಿಯೂ ನಕಲಿಯಾಗಿದ್ದು, ಸುಮಾರು 20 ಕೆಜಿ ಸ್ಫೋಟಕ ವಸ್ತುಗಳನ್ನೊಳಗೊಂಡಿತ್ತು ಎಂಬುದಾಗಿಯೂ ಭದ್ರತಾ ಪಡೆಗಳು ಮಾಹಿತಿ ನೀಡಿವೆ. ತದ ನಂತರ ಬಾಂಬ್ ನಿಷ್ಕ್ರಿಯ ದಳದ ಸಹಾಯದೊಂದಿಗೆ ಯಾವುದೇ ಅಪಾಯವಾಗದಂತೆ ಸ್ಫೋಟಕಗಳನ್ನು ನಾಶ ಮಾಡಲಾಗಿದ್ದು, ಆ ರಭಸಕ್ಕೆ ಕಾರು ನಜ್ಜುಗುಜ್ಜಾಗಿರುವುದಾಗಿಯೂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮೂಲಗಳ ಪ್ರಕಾರ ಈ ಕೃತ್ಯದ ಹಿಂದೆ ಜೈಶ್-ಎ-ಮೊಹಮ್ಮದ್ ಕೈವಾಡವಿದ್ದು, ಹಿಜ್ಬುಲ್ ಮುಜಾಹಿದ್ದೀನ್ ಸಾಥ್ ನೀಡಿದೆ ಎನ್ನಲಾಗಿದೆ.
#WATCH Inspector General of Police, Kashmir, Vijay Kumar speaks on Pulwama car bomb attack which was averted by security forces today. He says, “Jaish-e-Mohammed has the main role in this. Hizbul Mujahideen assisted them.” pic.twitter.com/eeHOqj8gjO
— ANI (@ANI) May 28, 2020
ಈ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳನ್ನು ಅಲ್ಲಿಂದ ಸ್ಥಳಾಂತರ ಮಾಡಲಾಗಿರುವುದಾಗಿಯೂ ಅಧಿಕಾರಿಗಳು ತಿಳಿಸಿದ್ದು, ಸಂಪೂರ್ಣ ಮುನ್ನೆಚ್ಚರಿಕೆ ಕ್ರಮಗಳನ್ನನುಸರಿಸಿ ಈ ಕಾರ್ಯಾಚರಣೆ ನಡೆಸಿರುವುದಾಗಿಯೂ ತಿಳಿಸಿದ್ದಾರೆ.
ಕಳೆದ ಬಾರಿ ಪಾಕಿಸ್ಥಾನ ಪ್ರೇರಿತ ಉಗ್ರ ಸಂಘಟನೆ ಪುಲ್ವಾಮಾದಲ್ಲಿ ನಡೆಸಿದ ದಾಳಿಗೆ ಭಾರತದ 40 ಮಂದಿ ಸೈನಿಕರು ಹುತಾತ್ಮರಾಗಿದ್ದರು. ಇದೀಗ ಮತ್ತೆ ಅಂತಹದ್ದೇ ಕೃತ್ಯವನ್ನು ನಡೆಸಲು ಭಯೋತ್ಪಾದಕ ಸಂಘಟನೆಗಳು ವ್ಯರ್ಥ ಪ್ರಯತ್ನ ನಡೆಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.