ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಶ್ರೀಲಂಕಾ ಪ್ರಧಾನಿ ಮಹಿಂದ ರಾಜಪಕ್ಷೆ ಅವರೊಂದಿಗೆ ಕೊರೋನವೈರಸ್ ಅಸಾಂಕ್ರಾಮಿಕ ರೋಗಕ್ಕೆ ಸಂಬಂಧಿಸಿದಂತೆ ಮಾತುಕತೆಯನ್ನು ನಡೆಸಿದ್ದಾರೆ. ಸಾಂಕ್ರಾಮಿಕ ರೋಗವನ್ನು ಎದುರಿಸಲು ಬೇಕಾದ ನೆರವನ್ನು ಶ್ರೀಲಂಕಾಗೆ ಭಾರತ ನೀಡಲಿದೆ ಎಂಬ ಭರವಸೆಯನ್ನು ಮೋದಿ ನೀಡಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ.
ಬುಧವಾರ ಮೋದಿ ಮತ್ತು ರಾಜಪಕ್ಷೆಯವರ ನಡುವೆ ಮಾತುಕತೆ ನಡೆದಿದೆ. ಉಭಯ ನಾಯಕರು ಸಾಂಕ್ರಾಮಿಕ ರೋಗವು ಆರೋಗ್ಯ ಮತ್ತು ಆರ್ಥಿಕತೆಯ ಮೇಲೆ ಬೀರುತ್ತಿರುವ ಪ್ರಭಾವಗಳ ಬಗ್ಗೆ ಚರ್ಚೆ ನಡೆಸಿದರು ಎಂದು ಹೇಳಲಾಗಿದೆ.
ಸಾಂಕ್ರಾಮಿಕ ರೋಗವನ್ನು ಎದುರಿಸಲು ಬೇಕಾದ ಎಲ್ಲಾ ನೆರೆವನ್ನು ದ್ವೀಪರಾಷ್ಟ್ರಕ್ಕೆ ಭಾರತ ನೀಡಲಿದೆ ಭರವಸೆ ಮೋದಿ ನೀಡಿದ್ದಾರೆ ಎನ್ನಲಾಗಿದೆ.
ಮಾತ್ರವಲ್ಲದೆ, ರಾಜಕೀಯದಲ್ಲಿ 50 ವರ್ಷಗಳನ್ನು ಪೂರೈಸುತ್ತಿರುವ ರಾಜಪಕ್ಷೆ ಅವರಿಗೆ ಮೋದಿ ಅಭಿನಂದನೆಗಳನ್ನು ತಿಳಿಸಿದ್ದಾರೆ.
“ರಾಜಪಕ್ಷೆಯವರು ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಶ್ರೀಲಂಕಾದ ಅಭಿವೃದ್ಧಿಗೆ ನೀಡಿದ ಕೊಡುಗೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ಸ್ಮರಿಸಿದ್ದಾರೆ” ಎಂದು ಪ್ರಕಟನೆ ತಿಳಿಸಿದೆ.
Also condoled the sad and untimely demise of Minister A. Thondaman, leader of Indian Origin Tamils in Sri Lanka. Prayers for peace to the departed soul and strength to his family to bear the grievous loss.
— Narendra Modi (@narendramodi) May 27, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.