ನವದೆಹಲಿ: ನೈರುತ್ಯ ಮಾನ್ಸೂನ್ ಕೇರಳ ಕರಾವಳಿಯನ್ನು ಜೂನ್ 1 ರ ವೇಳೆಗೆ ತಲುಪಲಿದೆ ಮತ್ತು ಭಾರತ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆಗಿಂತ ಮುಂಚೆಯೇ ತಲುಪಲಿದೆ ಎಂದು ವರದಿಗಳು ತಿಳಿಸಿವೆ.
ಮೇ 31 ಮತ್ತು ಜೂನ್ 4 ರ ನಡುವೆ ಅರೇಬಿಯನ್ ಸಮುದ್ರದ ಮೇಲೆ ಕಡಿಮೆ ಒತ್ತಡದ ಪ್ರದೇಶವು ಅಭಿವೃದ್ಧಿ ಹೊಂದುವ ನಿರೀಕ್ಷೆಯಿರುವುದರಿಂದ ಮಾನ್ಸೂನ್ ಮಾರುತಗಳು ಮುನ್ನಡೆಯಲು ಪರಿಸ್ಥಿತಿಗಳು ಅನುಕೂಲಕರವಾಗುತ್ತಿವೆ ಎಂದಿದೆ.
ಪಶ್ಚಿಮ-ಮಧ್ಯ ಮತ್ತು ಪಕ್ಕದ ನೈರುತ್ಯ ಅರೇಬಿಯನ್ ಸಮುದ್ರದ ಮೇಲೆ ಗುರುವಾರ ಕಡಿಮೆ ಒತ್ತಡದ ಪ್ರದೇಶವು ರೂಪುಗೊಂಡಿದೆ. ಇದು ಗುರುವಾರ ಡಿಪ್ರೆಶನ್ ಅತ್ತ ತೀವ್ರಗೊಳ್ಳುವ ಸಾಧ್ಯತೆಯಿದೆ ಮತ್ತು ಮುಂದಿನ ಮೂರು ದಿನಗಳಲ್ಲಿ ವಾಯುವ್ಯ ದಿಕ್ಕಿನಲ್ಲಿ ದಕ್ಷಿಣ ಒಮಾನ್ ಮತ್ತು ಪೂರ್ವ ಯೆಮೆನ್ ತೀರಗಳ ಕಡೆಗೆ ಮಾರುತಗಳು ಚಲಿಸುವ ಸಾಧ್ಯತೆಯಿದೆ.
ಇದು ಚಂಡಮಾರುತವಾಗಿ ತೀವ್ರಗೊಳ್ಳುವ ಸಾಧ್ಯತೆಯಿದೆ ಆದರೆ ಭಾರತದ ಪಶ್ಚಿಮ ಕರಾವಳಿಯ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಐಎಂಡಿ ವಿಜ್ಞಾನಿಗಳು ಹೇಳಿದ್ದಾರೆ.
ಮತ್ತೊಂದು ಕಡಿಮೆ ಒತ್ತಡದ ಪ್ರದೇಶವು ಆಗ್ನೇಯ ಮತ್ತು ಪಕ್ಕದ ಪೂರ್ವ-ಮಧ್ಯ ಅರೇಬಿಯನ್ ಸಮುದ್ರದ ಮೇಲೆ ರೂಪುಗೊಳ್ಳುವ ಸಾಧ್ಯತೆಯಿದೆ, ಇದು ಮೇ 31 ಮತ್ತು ಜೂನ್ 4 ರ ನಡುವೆ ಭಾರತೀಯ ಕರಾವಳಿಗೆ ಹತ್ತಿರವಾಗಲಿದೆ.
ಐಎಂಡಿ ಮಹಾನಿರ್ದೇಶಕ ಎಂ. ಮಹಾಪಾತ್ರ ಅವರು, “ಜೂನ್ 1 ಅಥವಾ 2 ರ ಸುಮಾರಿಗೆ ಕೇರಳದಲ್ಲಿ ಮಾನ್ಸೂನ್ ಆರಂಭವನ್ನು ನಾವು ನಿರೀಕ್ಷಿಸಬಹುದು” ಎಂದಿದ್ದಾರೆ.
“ಈ ಕಡಿಮೆ ಒತ್ತಡದ ಪ್ರದೇಶವು ಭಾರತೀಯ ಕರಾವಳಿಗೆ ಹತ್ತಿರದಲ್ಲಿದೆ ಮತ್ತು ಮಳೆ ಬರುವ ಸಾಧ್ಯತೆಯಿದೆ. ಪ್ರಸ್ತುತ ಕಡಿಮೆ ಒತ್ತಡದ ಪ್ರದೇಶವು ನಮ್ಮ ಕರಾವಳಿಯಿಂದ ದೂರದಲ್ಲಿದೆ ಮತ್ತು ಪಶ್ಚಿಮ ಕರಾವಳಿಯ ಮೇಲೆ ಭಾರಿ ಪರಿಣಾಮ ಬೀರುವ ಸಾಧ್ಯತೆ ಇಲ್ಲ. ಇದು ಈಗಾಗಲೇ ಯೆಮೆನ್ ಮತ್ತು ಓಮನ್ ತೀರಗಳಿಗೆ ಬಹಳ ಹತ್ತಿರದಲ್ಲಿದೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.