ಬೆಂಗಳೂರು : ಸುಮಾರು 1000 ದಷ್ಟು ಸರ್ಕಾರಿ ಶಾಲೆಗಳಲ್ಲಿ ಕನ್ನಡದ ಜೊತೆಗೆ ಇಂಗ್ಲಿಷ್ ಅನ್ನು ಸಹ ಬೋಧನಾ ಮಾಧ್ಯಮವಾಗಿ ಆರಂಭಿಸಲು ಸೂಚಿಸುವುದಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಿದ ಅವರು, ಸರ್ಕಾರಿ ಶಾಲೆಯಲ್ಲಿ ಕಲಿತ ಮಕ್ಕಳೂ ಆಂಗ್ಲ ಭಾಷೆಯಲ್ಲಿ ಪರಿಣಿತಿ ಪಡೆದು, ಜಾಗತಿಕ ಮಟ್ಟದಲ್ಲಿ ಪ್ರಾಶಸ್ತ್ಯ ಪಡೆಯುವಂತಾಗಲು ಈ ಕ್ರಮಕ್ಕೆ ಮುಂದಾಗುವುದಾಗಿ ತಿಳಿಸಿದ್ದಾರೆ. ಜೊತೆಯಲ್ಲಿ ಉರ್ದು ಮಾಧ್ಯಮಗಳಲ್ಲಿಯೂ ಇಂಗ್ಲಿಷ್ ಬೋಧನಾ ಮಾಧ್ಯಮ ಕಡ್ಡಾಯಗೊಳಿಸುವ ಸೂಚನೆಯನ್ನೂ ಅವರು ನೀಡಿದ್ದಾರೆ.
ಕರ್ನಾಟಕದ ಪ್ರತಿಯೊಂದು ಶಾಲೆಯಲ್ಲಿಯೂ ಕನ್ನಡ ಕಲಿಕೆ ಕಡ್ಡಾಯ. ಮಾತೃಭಾಷೆ ಕನ್ನಡವನ್ನು ನಿರ್ಲಕ್ಷ್ಯ ಮಾಡದಂತೆಯೂ ಅವರು ಎಚ್ಚರಿಕೆ ನೀಡಿದ್ದಾರೆ. ಒಂದು ವೇಳೆ ತಪ್ಪಿದಲ್ಲಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದೂ ಅವರು ತಿಳಿಸಿದ್ದಾರೆ. ಅರ್ಹತೆ ಪಡೆದ ಶಿಕ್ಷಕರಿಂದ ಕನ್ನಡ ಕಲಿಸುವಂತೆ ಕ್ರಮ ಕೈಗೊಳ್ಳಬೇಕು ಎಂದೂ ಅವರು ಶಿಕ್ಷಣ ಸಂಸ್ಥೆಗಳಿಗೆ ಸೂಚಿಸಿದ್ದಾರೆ. ಖಾಸಗಿ ಶಿಕ್ಷಣ ಸಂಸ್ಥೆಗಳೂ ಸರ್ಕಾರದ ಮಾರ್ಗದರ್ಶನವನ್ನು ಕಡ್ಡಾಯವಾಗಿ ಅನುಸರಣೆ ಮಾಡುವಂತೆಯೂ ಅವರು ತಿಳಿಸಿದ್ದಾರೆ.
ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಪಡೆಯುತ್ತಿರುವ ಬಡ ಮಕ್ಕಳಿಗೂ ಇಂಗ್ಲಿಷ್ ಭಾಷೆ ಸುಲಲಿತವಾಗಬೇಕು. ಜೊತೆಗೆ ಸರ್ಕಾರಿ ಶಾಲೆಗಳತ್ತ ವಿದ್ಯಾರ್ಥಿಗಳನ್ನು ಸೆಳೆಯುವ ಮತ್ತು ಉಳಿಸಿಕೊಳ್ಳುವ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರಿ ಶಾಲೆಯಲ್ಲಿ ಕಲಿಯುತ್ತಿರುವ ಬಡ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿ ಈ ಕ್ರಮವನ್ನು ಕೈಗೊಳ್ಳಲಾಗಿರುವುದಾಗಿಯೂ ಸುರೇಶ್ ಕುಮಾರ್ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.