ನವದೆಹಲಿ: ರಾಷ್ಟ್ರವ್ಯಾಪಿ ಲಾಕ್ಡೌನ್ನ ನಾಲ್ಕನೇ ಹಂತವು ಮುಗಿಯುವ ಮೂರು ದಿನಗಳ ಮೊದಲು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಎಲ್ಲಾ ಮುಖ್ಯಮಂತ್ರಿಗಳೊಂದಿಗೆ ಮಾತನಾಡುತ್ತಾ ಪ್ರಸ್ತುತ ಪರಿಸ್ಥಿತಿ, ಲಾಕ್ಡೌನ್ ವಿಸ್ತರಿಸುವ ಬಗ್ಗೆ ಅವರ ಅಭಿಪ್ರಾಯಗಳು ಮತ್ತು ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಭವಿಷ್ಯದ ಕಾರ್ಯತಂತ್ರವನ್ನು ಚರ್ಚಿಸಿದರು.
ಸಿಎಂಗಳೊಂದಿಗಿನ ಶಾ ಅವರ ಮಾತುಕತೆಯ ಬಗ್ಗೆ ಮಾಹಿತಿ ನೀಡಿರುವ ಅಧಿಕಾರಿಗಳು, ಆರ್ಥಿಕ ಚಟುವಟಿಕೆಯಲ್ಲಿ ಸಾಕಷ್ಟು ಸಡಿಲಿಕೆಯೊಂದಿಗೆ ಲಾಕ್ ಡೌನ್ ಅನ್ನು ವಿಸ್ತರಿಸಬೇಕೆಂದು ಅನೇಕ ರಾಜ್ಯಗಳು ಪುನರುಚ್ಚರಿಸಿದೆ ಎಂದು ಹೇಳಿದರು. ಎಲ್ಲರ ಸಲಹೆಗಳನ್ನು ಗಮನಿಸಲಾಗಿದೆ, ಅದನ್ನು ಗಣನೆಗೆ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.
ಎರಡು ರಾಜ್ಯ ಮುಖ್ಯಮಂತ್ರಿಗಳ ಕಚೇರಿಗಳ ಅಧಿಕಾರಿಗಳ ಪ್ರಕಾರ, ಲಾಕ್ ಡೌನ್, ಆರ್ಥಿಕ ಚಟುವಟಿಕೆ ಮತ್ತು ವಲಸೆ ಕಾರ್ಮಿಕರ ಸ್ಥಿತಿಗತಿ, ಇನ್ನೂ ಸಿಲುಕಿ ಹಾಕಿರುವ ಜನರ ಸಂಖ್ಯೆ ಇತ್ಯಾದಿಗಳಿಗೆ ಸಂಬಂಧಿಸಿದಂತೆ ಶಾ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದರು. ಸಿಎಂಗಳೊಂದಿಗೆ 5-6 ನಿಮಿಷದ ಸಂಭಾಷಣೆ ನಡೆಸಿದರು ಎಂದು ವರದಿಗಳು ತಿಳಿಸಿವೆ.
ಇದಕ್ಕೂ ಮೊದಲು ಅನೇಕ ಬಾರಿ ವರ್ಚುವಲ್ ಸಭೆಯ ಅಧ್ಯಕ್ಷತೆಯನ್ನು ಪ್ರಧಾನಿ ನರೇಂದ್ರ ಮೋದಿ ವಹಿಸಿದ್ದರು.
ಲಾಕ್ಡೌನ್ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಪಡೆಯಲು ಅಮಿತ್ ಶಾ ಅವರು ಮೊದಲ ಬಾರಿಗೆ ಎಲ್ಲಾ ಸಿಎಂಗಳನ್ನು ವೈಯಕ್ತಿಕವಾಗಿ ಸಭೆಗೆ ಆಹ್ವಾನಿಸಿದ್ದರು. ಲಾಕ್ಡೌನ್ ಮುಂದುವರಿಯಬೇಕೆಂದು ಹಲವರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ಕ್ರಮೇಣ ಸಾಮಾನ್ಯ ಜೀವನಕ್ಕೆ ಮರಳುವುದು ಸೂಕ್ತ ಎಂದು ಅನೇಕ ಸಿಎಂಗಳು ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.