ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಜಮ್ಮು ಮತ್ತು ಕಾಶ್ಮೀರ, ಅಸ್ಸಾಂ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮತ್ತು ಮಣಿಪುರದ 15 ಸಂಸದರನ್ನು ಡಿಲಿಮಿಟೇಶನ್ ಕಮಿಷನ್ ಸಹಾಯಕ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿದ್ದಾರೆ. ಜಮ್ಮು-ಕಾಶ್ಮೀರ ಮತ್ತು ಈಶಾನ್ಯ ರಾಜ್ಯಗಳಲ್ಲಿ ಲೋಕಸಭೆ ಮತ್ತು ಅಸೆಂಬ್ಲಿ ಕ್ಷೇತ್ರಗಳನ್ನು ಡಿಲಿಮಿಟೇಶನ್ (ಗಡಿ ಮರು ನಿರ್ಣಯ) ಮಾಡಲು ಇವರು ಆಯೋಗಕ್ಕೆ ಸಹಾಯ ಮಾಡಲಿದ್ದಾರೆ.
ಇಬ್ಬರು ಕೇಂದ್ರ ಸಚಿವರನ್ನು ಕೂಡ ಸಹಾಯಕ ಸದಸ್ಯರನ್ನಾಗಿ ನೇಮಿಸಲಾಗಿದೆ. ಅಲ್ಲದೆ, ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರನ್ನು ಸಹಾಯಕ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ.
ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ಅವರ ಅಧ್ಯಕ್ಷತೆಯಲ್ಲಿ ಮಾರ್ಚ್ 7 ರಂದು ಡಿಲಿಮಿಟೇಶನ್ ಆಯೋಗವನ್ನು ರಚಿಸಲಾಯಿತು.
ಲೋಕಸಭಾ ಸ್ಪೀಕರ್ ನಾಮನಿರ್ದೇಶನ ಮಾಡಿದ 15 ಸಹಾಯಕ ಸದಸ್ಯರಲ್ಲಿ ಕೇಂದ್ರ ರಾಜ್ಯ ಸಚಿವ ಕಿರಣ್ ರಿಜ್ಜು, ಕೇಂದ್ರ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಮತ್ತು ಜಮ್ಮು- ಕಾಶ್ಮೀರದ ಮುಖ್ಯಮಂತ್ರಿ ಅಬ್ದುಲ್ಲಾ ಸೇರಿದ್ದಾರೆ. ಅಲ್ಲದೇ, ಬಾರಾಮುಲ್ಲಾ ಸಂಸದ ಮೊಹಮ್ಮದ್ ಅಕ್ಬರ್ ಲೋನ್, ಅನಂತ್ನಾಗ್ ಸಂಸದ ಹಸ್ನೈನ್ ಮಸೂಡಿ ಮತ್ತು ಜಮ್ಮು-ಪೂಂಚ್ ಸಂಸದೀಯ ಸ್ಥಾನದ ಸಂಸದ ಜುಗಲ್ ಕಿಶೋರ್ ಶರ್ಮಾ ಅವರನ್ನು ಓಂ ಬಿರ್ಲಾ ನಾಮನಿರ್ದೇಶನ ಮಾಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯ್ದೆ 2019 ರ ಅಡಿಯಲ್ಲಿ, ಜಮ್ಮು ಮತ್ತು ಕಾಶ್ಮೀರದ ಲೋಕಸಭಾ ಮತ್ತು ವಿಧಾನಸಭಾ ಕ್ಷೇತ್ರಗಳ ಗಡಿಯನ್ನು ಡಿಲಿಮಿಟೇಶನ್ ಆಯೋಗವು ಮರು ನಿರ್ಣಯ ಮಾಡಲಿದೆ.
ಕೇಂದ್ರ ಸಚಿವ ರಿಜ್ಜು ಅರುಣಾಚಲ ಪ್ರದೇಶವನ್ನು ಪ್ರತಿನಿಧಿಸಲಿದ್ದಾರೆ.
ಡಿಲಿಮಿಟೇಶನ್ನ ಸಮಯ-ಮಿತಿಯನ್ನು ಇನ್ನೂ ನಿಗದಿಪಡಿಸಲಾಗಿಲ್ಲ. ಮೂಲಗಳ ಪ್ರಕಾರ, ಈ ಕಾರ್ಯವು ಒಂದು ವರ್ಷದಲ್ಲಿ ಪೂರ್ಣಗೊಳ್ಳಲಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಒಟ್ಟು 114 ವಿಧಾನಸಭಾ ಸ್ಥಾನಗಳಿದ್ದು, ಅದರಲ್ಲಿ 24 ವಿಧಾನಸಭಾ ಸ್ಥಾನಗಳನ್ನು ಪಾಕಿಸ್ಥಾನ ಆಕ್ರಮಿತ ಕಾಶ್ಮೀರಕ್ಕೆ ಮೀಸಲಿಡಲಾಗಿದೆ. ಇಲ್ಲಿಯವರೆಗೆ, 90 ವಿಧಾನಸಭಾ ಸ್ಥಾನಗಳಲ್ಲಿ ಚುನಾವಣೆ ನಡೆದಿದೆ. ಡಿಲಿಮಿಟೇಶನ್ ನಂತರ ಸ್ಥಾನಗಳನ್ನು ಹೆಚ್ಚಿಸುವ ಸಾಧ್ಯತೆಯಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.