ನವದೆಹಲಿ: ಕೊರೋನಾವೈರಸ್ ಸಾಂಕ್ರಾಮಿಕ ರೋಗದ ಕಾರಣದಿಂದ ದೇಶವ್ಯಾಪಿಯಾಗಿ ಉಂಟಾದ ಉದ್ಯೋಗ ನಷ್ಟದ ಬಗ್ಗೆ ದತ್ತಾಂಶವನ್ನು ಸಂಗ್ರಹ ಮಾಡುವಂತೆ ಕೇಂದ್ರ ವಿತ್ತ ಸಚಿವಾಲಯವು ಕಾರ್ಮಿಕ ಸಚಿವಾಲಯಕ್ಕೆ ಸೂಚನೆಯನ್ನು ನೀಡಿದೆ.
“ಉದ್ಯೋಗ ನಷ್ಟ ಮತ್ತು ವೇತನ ಕಡಿತದಂತಹ ಸಮಸ್ಯೆಗಳಿಗೆ ಸಂಬಂಧಿಸಿದಂತೆ ವಿತ್ತ ಸಚಿವಾಲಯವು ಕಾರ್ಮಿಕ ಸಚಿವಾಲಯದ ಜೊತೆ ಸೇರಿ ಕಾರ್ಯನಿರ್ವಹಿಸುತ್ತಿದೆ. ಉದ್ಯೋಗ ನಷ್ಟ ಮತ್ತು ವೇತನ ಕಡಿತದ ಬಗ್ಗೆ ದತ್ತಾಂಶಗಳನ್ನು ಸಂಗ್ರಹ ಮಾಡುವಂತೆ ವಿತ್ತ ಸಚಿವಾಲಯವು ಕಾರ್ಮಿಕ ಸಚಿವಾಲಯಕ್ಕೆ ಸೂಚನೆಯನ್ನು ನೀಡಿದೆ” ಎಂದು ವಿತ್ತ ಸಚಿವಾಲಯದ ಮೂಲಗಳು ತಿಳಿಸಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಮಾರ್ಚ್ 25ರಂದು ಭಾರತದಲ್ಲಿ ಲಾಕ್ ಡೌನ್ ಅನ್ನು ಘೋಷಣೆ ಮಾಡಲಾಯಿತು. ಪ್ರಸ್ತುತ ನಾಲ್ಕನೇ ಹಂತದ ಲಾಕ್ಡೌನ್ ಭಾರತದಲ್ಲಿ ನಡೆಯುತ್ತಿದೆ. ಮೇ 31ಕ್ಕೆ ಇದು ಮುಗಿಯಲಿದ್ದು, ಆ ಬಳಿಕ ಯಾವ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು ಎಂಬ ಬಗ್ಗೆ ನಾಳೆ ಘೋಷಣೆಯಾಗುವ ಸಾಧ್ಯತೆ ಇದೆ.
ಎರಡು ತಿಂಗಳ ಲಾಕ್ಡೌನ್ ಹಿನ್ನೆಲೆಯಲ್ಲಿ ಆರ್ಥಿಕ ಚಟುವಟಿಕೆಗಳು ಸ್ಥಗಿತಗೊಂಡ ಪರಿಣಾಮವಾಗಿ ಭಾರಿ ಪ್ರಮಾಣದ ನಷ್ಟಗಳು ಸಂಭವಿಸಿದೆ. ನಷ್ಟದ ಹಿನ್ನೆಲೆಯಲ್ಲಿ ಹಲವರು ಉದ್ಯೋಗಗಳನ್ನು ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ ಮತ್ತು ಹಲವರು ವೇತನ ಕಡಿತದ ಸಮಸ್ಯೆಯನ್ನು ಎದುರಿಸಬಹುದು. ಹೀಗಾಗಿ ಸರಕಾರ ಸಮಸ್ಯೆ ನಿವಾರಿಸುವತ್ತ ಪ್ರಯತ್ನ ನಡೆಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.