ಬೆಂಗಳೂರು : ಪರವಾನಿಗೆ ಪಡೆಯದೆ ರಸ್ತೆಗಿಳಿಯುವ ವಾಹನಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅಂತಹ ವಾಹನಗಳ ಲೈಸೆನ್ಸ್ ರದ್ದು ಮಾಡಿ ಪ್ರಕರಣ ದಾಖಲಿಸಬೇಕು ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದ್ದಾರೆ.
ಹಾವೇರಿಯಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು ಈ ಮಾಹಿತಿ ನೀಡಿದ್ದಾರೆ. ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣದ 500 ಮೀಟರ್ ವ್ಯಾಪ್ತಿಯೊಳಗೆ ಪ್ರಯಾಣಿಕರನ್ನು ಹತ್ತಿಸಿಕೊಳ್ಳುವುದು, ಇಳಿಸುವುದು, ಸಾಮರ್ಥ್ಯಕ್ಕೂ ಅಧಿಕ ಪ್ರಯಾಣಿಕರನ್ನು ತುಂಬಿಕೊಂಡು ಹೋಗುವಂತಹ ವಾಹನಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಅಲ್ಲದೆ, ಈ ಕುರಿತಂತೆ ಸಾರಿಗೆ ಅಧಿಕಾರಿಗಳು, ಪೊಲೀಸರು ಜಂಟಿಯಾಗಿ ಕ್ರಮ ಕೈಗೊಳ್ಳುವಂತೆಯೂ ಅವರು ಸೂಚಿಸಿದ್ದಾರೆ.
ಕೊರೋನಾ ಲಾಕ್ಡೌನ್ ನಿಂದಾಗಿ ಸಾರಿಗೆ ಇಲಾಖೆ ಹೆಚ್ಚು ನಷ್ಟವನ್ನು ಅನುಭವಿಸುತ್ತಿದೆ. ಮುಂದಿನ ದಿನಗಳಲ್ಲಿ ಈ ನಷ್ಟವನ್ನು ಸರಿದೂಗಿಸುವತ್ತಲೂ ಇಲಾಖೆ ಗಮನ ಹರಿಸಬೇಕು. ಮೂರು ತಿಂಗಳಿಗೊಮ್ಮೆ ಸಮಯೋಚಿತ ಕ್ರಿಯಾ ಯೋಜನೆಗಳನ್ನು ಸಿದ್ಧ ಮಾಡಿಕೊಳ್ಳುವ ಮೂಲಕ ಸಾರಿಗೆ ಸಂಸ್ಥೆಯ ನಷ್ಟವನ್ನು ಭರಿಸಿಕೊಳ್ಳುವಲ್ಲಿ ನೌಕರರು ಶ್ರಮ ವಹಿಸಬೇಕು ಎಂದು ಅವರು ತಿಳಿಸಿದ್ದಾರೆ. ಅಲ್ಲದೆ ಸ್ವಚ್ಛತೆಗೂ ಆಧ್ಯತೆ ನೀಡುವಂತೆ ಅವರು ಸೂಚಿಸಿದ್ದಾರೆ.
ಇದೇ ಸಂದರ್ಭದಲ್ಲಿ ಅಧಿಕಾರಿಗಳು ವಿವಿಧ ಬೇಡಿಕೆಗಳನ್ನು ಸಚಿವರ ಮುಂದಿಟ್ಟರು. ಕಾರ್ಯಕ್ರಮದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೇರಿದಂತೆ ಸಾರಿಗೆ ಸಂಸ್ಥೆಯ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.