ಬೆಂಗಳೂರು: ರಾಜ್ಯದೆಲ್ಲೆಡೆ ಕೊರೋನಾ ನಾಲ್ಕನೇ ಹಂತದ ಲಾಕ್ಡೌನ್ ಕ್ರಮ ಜಾರಿಯಲ್ಲಿದ್ದು, ಈ ಹಂತದಲ್ಲಿ ಭಾನುವಾರ ಹೊರತುಪಡಿಸಿದಂತೆ ಉಳಿದೆಲ್ಲಾ ದಿನವೂ ಲಾಕ್ಡೌನ್ ನಿಯಮಗಳನ್ನು ಸಡಿಲಗೊಳಿಸಿ ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿತ್ತು. ಆದರೆ ಭಾನುವಾರ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಕಟ್ಟುನಿಟ್ಟಿನ ಲಾಕ್ಡೌನ್ ನಿಯಮಗಳನ್ನು ಪಾಲಿಸುವಂತೆ ಸರ್ಕಾರ ಸೂಚಿಸಿತ್ತು. ಆದರೆ ಇದೀಗ ಭಾನುವಾರದ ಕಟ್ಟುನಿಟ್ಟಿನ ಲಾಕ್ಡೌನ್ ಕ್ರಮವನ್ನು ಸಡಿಲಗೊಳಿಸಿ ಆದೇಶ ಹೊರಡಿಸಿದೆ.
ಲಾಕ್ಡೌನ್ನ ನಾಲ್ಕನೇ ಹಂತದಲ್ಲಿ ಶನಿವಾರ ರಾತ್ರಿ 7 ಗಂಟೆಯಿಂದ ತೊಡಗಿದಂತೆ, ಸೋಮವಾರ ಬೆಳಗ್ಗೆ 7 ಗಂಟೆಯವರೆಗೆ ಸಂಪೂರ್ಣ ಲಾಕ್ಡೌನ್ ನಿಯಮವನ್ನು ರಾಜ್ಯ ಸರ್ಕಾರ ಜಾರಿಗೆ ತಂದಿತ್ತು. ಸಾರ್ವಜನಿಕರಿಗೆ ತೊಂದರೆಯಾಗದಿರಲಿ ಎಂಬ ಕಾರಣದಿಂದ ಕೇವಲ ಅಗತ್ಯ ಸೇವೆಗಳನ್ನಷ್ಟೇ ನೀಡುವ ಅವಕಾಶವನ್ನು ಮಾತ್ರವೇ ರಾಜ್ಯ ಸರ್ಕಾರ ನೀಡಿತ್ತು. ಆದರೆ ಸಾರ್ವಜನಿಕರು ಭಾನುವಾರದ ಲಾಕ್ಡೌನ್ ನಿಯಮಗಳನ್ನು ಸಡಿಲ ಮಾಡುವಂತೆ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಿದ್ದು, ಅದನ್ನು ಪುರಸ್ಕರಿಸಿರುವ ಬಿಎಸ್ವೈ ಸರ್ಕಾರ ಸಂಡೇ ಲಾಕ್ಡೌನ್ ನಿಯಮಗಳನ್ನು ಸರಳಗೊಳಿಸಿದೆ.
ಆದರೆ ಕೊರೋನಾ ನಿಯಂತ್ರಣ ಕ್ರಮಗಳನ್ನು ಅನುಸರಿಸಿಕೊಂಡು ಎಚ್ಚರಿಕೆಯಿಂದಿರುವಂತೆಯೂ ಸರ್ಕಾರ ಸಾರ್ವಜನಿಕರಿಗೆ ಮನವಿಯನ್ನು ಮಾಡಿದೆ. ಇನ್ನು ಸಂಡೇ ಲಾಕ್ಡೌನ್ ಗೆ ಸಂಬಂಧಿಸಿದಂತೆ ಕಳೆದ ಭಾನುವಾರದ ಲಾಕ್ಡೌನ್ ಜನರ ಅನಗತ್ಯ ಓಡಾಟವಿಲ್ಲದೆ ಒಂದು ಮಟ್ಟಿಗೆ ಯಶಸ್ವಿಯಾಗಿತ್ತು ಎನ್ನಬಹುದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.