ನವದೆಹಲಿ: ದೇಶದೆಲ್ಲೆಡೆ ವ್ಯಾಪಕವಾಗಿ ಕೊರೋನಾ ಸಾಂಕ್ರಾಮಿಕ ವೈರಸ್ ಹಬ್ಬಲು ತಬ್ಲಿಘಿ ಜಮಾತ್ನ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ ಸದಸ್ಯರೇ ಕಾರಣ ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರು ತಿಳಿಸಿದ್ದಾರೆ. ಜಮಾತ್ನಲ್ಲಿ ಭಾಗಿಗಳಾದ ಸದಸ್ಯರನ್ನು “ಕೊರೋನಾ ವೈರಸ್ನ ವಾಹಕರು” ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ.
ಈ ಕುರಿತಂತೆ ಮಾತನಾಡಿದ ನಖ್ವಿ, ಕೊರೋನಾ ವೈರಸ್ ಹರಡದಂತೆ ಕಠಿಣ ಕ್ರಮ, ಲಾಕ್ಡೌನ್ ಪ್ರಕ್ರಿಯೆಗಳು ಜಾರಿಯಲ್ಲಿದ್ದರೂ, ನೂರಾರು ಮಂದಿ ದೇಶ, ವಿದೇಶದ ಜನರು ಈ ಸಭೆಯಲ್ಲಿ ಭಾಗವಹಿಸಿದ್ದಾರೆ. ಜೊತೆಗೆ ಅವರಲ್ಲಿ ಕೆಲವರು ಸಭೆಯ ನಂತರವೂ ಮರ್ಕಜ್ನಲ್ಲಿಯೇ ಉಳಿದುಕೊಳ್ಳುವ ಮೂಲಕ ಕಾನೂನನ್ನು ಮುರಿದಿದ್ದಾರೆ. ಕೊರೋನಾ ವೈರಸ್ ಹೆಚ್ಚುತ್ತಿರುವ ಸಂದರ್ಭದಲ್ಲಿ ಇಂತಹ ಬೇಜವಾಬ್ದಾರಿ ನಡೆ ಅಕ್ಷಮ್ಯ ಎಂದು ತಿಳಿಸಿದ್ದಾರೆ.
ಅಲ್ಲದೆ ಇಂತಹ ಕೃತ್ಯವನ್ನು ಕ್ರಿಮಿನಲ್ ಆಕ್ಟ್ ಎಂದು ಕರೆದಿರುವ ನಖ್ವಿ, ಇದು ದೇಶದ ಎಲ್ಲಾ ಮುಸ್ಲಿಮರ ತಪ್ಪಲ್ಲ. ಬದಲಾಗಿ ಜಮಾತ್ನಲ್ಲಿ ಭಾಗಿಗಳಾಗಿ ಬೇಕಾಬಿಟ್ಟಿ ವರ್ತಿಸಿದ ಕೆಲವರ ತಪ್ಪು ಎಂದಿದ್ದಾರೆ. ಅವರ ನಿರ್ಲಕ್ಷ್ಯದ ಕಾರಣದಿಂದಲೇ ದೇಶದಾದ್ಯಂತ ಕೊರೋನಾ ಹರಡುವಿಕೆಯ ಪ್ರಮಾಣ ಹೆಚ್ಚಿದ್ದು, ತಬ್ಲಿಘಿಗಳ ತಪ್ಪನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದು ಸಾಧ್ಯವೇ ಇಲ್ಲ ಎಂದು ತಿಳಿಸಿದ್ದಾರೆ.
ಇನ್ನು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಎರಡನೇ ಅವಧಿಗೆ ಆಯ್ಕೆಯಾಗಿ ಒಂದು ವರ್ಷವನ್ನು ಪೂರೈಸಿದ್ದು, ಆ ಹಿನ್ನೆಲೆಯಲ್ಲಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಸರ್ಕಾರದ ಸಾಧನೆಗಳನ್ನು ಕೊಂಡಾಡಿದ್ದಾರೆ. 2019 ನೇ ಸಾಲಿನಲ್ಲಿ ಸರ್ಕಾರ ಹಲವು ಮಹತ್ವದ ನಿರ್ಣಯಗಳನ್ನು ತೆಗೆದುಕೊಂಡಿದ್ದು, ತ್ರಿವಳಿ ತಲಾಕ್ ನಿಷೇಧ, ರಾಮ ಮಂದಿರ ನಿರ್ಮಾಣ, 370 ನೇ ವಿಧಿಯನ್ನು ನಿಷೇಧ ಮಾಡುವ ಮೂಲಕ ಮಹತ್ವದ ಹೆಜ್ಜೆಗಳನ್ನಿರಿಸಿದೆ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.