ನವದೆಹಲಿ: ಕೇಂದ್ರದಲ್ಲಿ ಎರಡನೇ ಬಾರಿಗೆ ಆಡಳಿತಕ್ಕೆ ಬಂದಿರುವ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎರಡನೇ ಅವಧಿಯ ಒಂದು ವರ್ಷವನ್ನು ಪೂರೈಸಿದೆ. ಇಂತಹ ಸಂದರ್ಭದಲ್ಲಿ ಪ್ರಪಂಚವೇ ಕೊರೋನಾ ಎಂಬ ಮಹಾ ಮಾರಿಗೆ ಶರಣಾಗಿದ್ದು, ಭಾರತಕ್ಕೂ ಇದು ದೊಡ್ಡ ಸವಾಲಾಗಿ ಪರಿಣಮಿಸಿದೆ. ಆದರೆ ಭಾರತ ಮೋದಿ ಅವರಂತಹ ಸಮರ್ಥ ನಾಯಕತ್ವದ ಕೈಯಲ್ಲಿದ್ದು, ಇವೆಲ್ಲವನ್ನೂ ಸಮರ್ಥವಾಗಿ ನಿಭಾಯಿಸುವ ಚಾಕಚಕ್ಯತೆ ಅವರಲ್ಲಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ತಿಳಿಸಿದ್ದಾರೆ.
ಖಾಸಗಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಈ ವರೆಗೆ ಇಂತಹ ಒಂದು ಕಠಿಣ ಪರಿಸ್ಥಿತಿ ಯಾರ ಅಧಿಕಾರಾವಧಿಯಲ್ಲಿಯೂ ಎದುರಾಗಿಲ್ಲ. ಇಂತಹ ಮಾರಕ ಸಾಂಕ್ರಾಮಿಕ ರೋಗದಿಂದ ಭಾರತವನ್ನು ಕಾಪಾಡುವ, ಸಮರ್ಥವಾಗಿ ಮುನ್ನಡೆಸುವ ಶಕ್ತಿ ನರೇಂದ್ರ ಮೋದಿ ಅವರಿಗಿದೆ. ಮೋದಿ ಅವರನ್ನು ನಾಯಕನನ್ನಾಗಿ ಪಡೆದಿರುವುದು ನಮ್ಮೆಲ್ಲರ ಅದೃಷ್ಟವೇ ಸರಿ ಎಂದು ಅವರು ತಿಳಿಸಿದ್ದಾರೆ.
ಮೋದಿ ಅಧಿಕಾರಕ್ಕೇರಿದ ನಂತರದಲ್ಲಿ ದೇಶದಲ್ಲಿ ಮಹತ್ವದ ಬದವಾವಣೆಗಳಾಗಿವೆ. ಎಲ್ಲಾ ಕ್ಷೇತ್ರದಲ್ಲಿಯೂ ಬದಲಾವಣೆಯ ಗಾಳಿ ಬೀಸಿದೆ. ರಕ್ಷಣಾ ಇಲಾಖೆಗೆ ಸಂಬಂಧಿಸಿದಂತೆಯೂ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿರುವ ಕೇಂದ್ರ ಸರ್ಕಾರ, ಆ ಮೂಲಕ ಭದ್ರತಾ ಪಡೆಗಳ ಸಾಮರ್ಥ್ಯ ಹೆಚ್ಚಿಸಿದ್ದಾರೆ ಎಂದೂ ರಾಜನಾಥ್ ಸಿಂಗ್ ತಿಳಿಸಿದ್ದಾರೆ. ಅಲ್ಲದೆ ಯುದ್ಧ ಸಾಮಗ್ರಿಗಳನ್ನು ವಿದೇಶಗಳಿಗೆ ರಫ್ತು ಮಾಡುವ ನಿಟ್ಟಿನಲ್ಲಿಯೂ ಮೋದಿ ಸರ್ಕಾರ ದಿಟ್ಟ ನಿಲುವುಗಳನ್ನು ತೆಗೆದುಕೊಂಡಿದ್ದಾಗಿ ಅವರು ಹೇಳಿದ್ದಾರೆ.
ಮೋದಿ ಅವರು ಸಮಯೋಚಿತವಾಗಿ ತೆಗೆದುಕೊಳ್ಳುತ್ತಿರುವ ಸರಿಯಾದ ನಿರ್ಧಾರದ ಕಾರಣದಿಂದ ಭಾರತ ಇಂದು ವಿಶ್ವ ಮನ್ನಣೆ ಪಡೆಯುತ್ತಿದೆ. ಭಾರತವನ್ನು ಸಮರ್ಥವಾಗಿ ಮುನ್ನಡೆಸುವ, ಎಲ್ಲಾ ಸವಾಲುಗಳನ್ನು ಎದುರಿಸಿ ಸದೃಢ ಭಾರತವನ್ನು, ಸ್ವಾವಲಂಬಿ ರಾಷ್ಟ್ರವನ್ನು ನಿರ್ಮಾಣ ಮಾಡುವ ಶಕ್ತಿ ಮೋದಿ ಅವರಿಗಿದೆ ಎಂದು ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.