ನವದೆಹಲಿ: ಕೊರೋನವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಮುಂಚೂಣಿಯಲ್ಲಿ ನಿಂತು ಹೋರಾಟವನ್ನು ನಡೆಸುತ್ತಿರುವ ವೈದ್ಯರು, ನರ್ಸ್ಗಳು ಮತ್ತು ಸ್ವಚ್ಛತಾ ಕಾರ್ಮಿಕರ ವಿರುದ್ಧ ದೌರ್ಜನ್ಯ ಎಸಗುವುದು, ದುರ್ವರ್ತನೆ ತೋರಿಸುವುದು ಸ್ವೀಕಾರಾರ್ಹವಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ರಾಜೀವ್ ಗಾಂಧಿ ಯುನಿವರ್ಸಿಟಿ ಆಫ್ ಹೆಲ್ತ್ ಸೈನ್ಸ್ನ 25ನೇ ಸ್ಥಾಪನೆ ದಿನದ ಅಂಗವಾಗಿ ಮಾತನಾಡಿದ ಪ್ರಧಾನಿ ಮೋದಿ, “ನೀವು ಅತೀವ ಕಾಳಜಿ ವಹಿಸುವ ವಿಷಯದ ಬಗ್ಗೆ ನನಗೆ ಅರಿವಿದೆ. ಜನರ ಮನಸ್ಥಿತಿಯ ಹಿನ್ನೆಲೆಯಲ್ಲಿ ಮುಂಚೂಣಿಯಲ್ಲಿ ನಿಂತು ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯರು, ನರ್ಸ್ಗಳು, ಸ್ವಚ್ಛತಾ ಕಾರ್ಮಿಕರು ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ” ಎಂದಿದ್ದಾರೆ.
“ಮುಂಚೂಣಿ ಹೋರಾಟಗಾರರ ವಿರುದ್ಧ ದೌರ್ಜನ್ಯ ಎಸಗುವುದು, ದುರ್ವರ್ತನೆ ತೋರಿಸುವುದು ಸ್ವೀಕಾರಾರ್ಹ ಕೃತ್ಯವಲ್ಲ ಎಂಬುದನ್ನು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. ಮುಂಚೂಣಿ ಹೋರಾಟಗಾರರಿಗೆ ನಾವು 50 ಲಕ್ಷ ರೂಪಾಯಿಗಳ ವಿಮೆಯನ್ನು ಒದಗಿಸಿದ್ದೇವೆ” ಎಂದಿದ್ದಾರೆ.
ಎಪ್ರಿಲ್ ತಿಂಗಳಲ್ಲಿ ಕೇಂದ್ರ ಸರ್ಕಾರವು ಆರೋಗ್ಯ ಕಾರ್ಯಕರ್ತರ ಮೇಲಿನ ದೌರ್ಜನ್ಯವನ್ನು ತಡೆಗಟ್ಟಲು ಸುಗ್ರೀವಾಜ್ಞೆಯನ್ನು ತಂದಿದೆ. ಅವರ ವಿರುದ್ಧ ದೌರ್ಜನ್ಯವೆಸಗುವವರಿಗೆ ದಂಡ ಸಮೇತ ಸೆರೆವಾಸವನ್ನು ವಿಧಿಸಲಾಗಿದೆ ಎಂದಿದ್ದಾರೆ.
ಕೊರೋನಾವೈರಸ್ ಅಗೋಚರವಾಗಿದೆ, ಆದರೆ ಕೊರೋನಾ ಯೋಧರು ಅಜೇಯರಾಗಿದ್ದಾರೆ ಎಂದಿದ್ದಾರೆ.
Addressing the 25th anniversary programme of RGUHS. https://t.co/tCchT1oEgA
— Narendra Modi (@narendramodi) June 1, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.