ಧಾರವಾಡ : ಜೂ. 25 ರಿಂದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ನಡೆಯಲಿರುವ ಅಂತಿಮ ಪರೀಕ್ಷೆಗಳಿಗೆ ತೆರಳಲು ಪೂರಕವಾಗಿ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸುವ ಭರವಸೆಯನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ನೀಡಿದ್ದಾರೆ. ವಿದ್ಯಾರ್ಥಿಗಳಿಗೆ ಸೂಕ್ತ ದರದಲ್ಲಿ ಬಸ್ಸುಗಳನ್ನು ವ್ಯವಸ್ಥೆ ಮಾಡುವ ಸಲುವಾಗಿ ಈಗಾಗಲೇ ಸಾರಿಗೆ ಇಲಾಖೆಯ ಜೊತೆಗೆ ಮಾತುಕತೆ ನಡೆಸಲಾಗಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.
ಪರೀಕ್ಷೆಗಳು ಮಕ್ಕಳ ಶಿಕ್ಷಣದ ಮುಖ್ಯ ಹಂತವಾಗಿದ್ದು ಅದಕ್ಕಾಗಿ ಅವರಿಗೆ ಪೂರಕ ಪ್ರೋತ್ಸಾಹ ನೀಡುವುದು ಎಲ್ಲರ ಕರ್ತವ್ಯ. ಜೊತೆಗೆ ಅವರಿಗೆ ಇಂತಹ ಕಠಿಣ ಸಂದರ್ಭದಲ್ಲಿ ಪರೀಕ್ಷೆಗಳಿಗೆ ತೆರಳುವುದಕ್ಕೆ ಹೆಚ್ಚು ಅನುಕೂಲ ಮಾಡಿಕೊಡುವತ್ತಲೂ ಗಮನ ಹರಿಸಬೇಕಾಗಿದ್ದು, ಅದಕ್ಕಾಗಿ ಸಾರಿಗೆ ವ್ಯವಸ್ಥೆ ಕಲ್ಪಿಸುವುದಾಗಿ ತಿಳಿಸಿದ್ದಾರೆ. ಜೊತೆಗೆ ಇದಕ್ಕಾಗಿ ಖಾಸಗಿ ಶಾಲಾ ವಾಹನಗಳನ್ನು ಬಳಕೆ ಮಾಡಲಾಗುವುದಾಗಿ ತಿಳಿಸಿದ್ದಾರೆ. ಪ್ರತಿ ಜಿಲ್ಲೆಗೆ ಸಂಬಂಧಿಸಿದಂತೆ ಮಾರ್ಗಗಳ ನಕ್ಷೆಯನ್ನೂ ಸಿದ್ಧಪಡಿಸುತ್ತಿರುವುದಾಗಿ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಸರ್ಕಾರ ಮುನ್ನೆಚ್ಚರಿಕಾ ಕ್ರಮಗಳನ್ನೂ ಈಗಾಗಲೇ ಕೈಗೊಂಡಿದೆ. ಮಕ್ಕಳ ಬಗ್ಗೆ ಆಂತಕ ಪಡುವ ಅಗತ್ಯವಿಲ್ಲ ಎಂದು ಸಚಿವರು ಪೋಷಕರಿಗೆ ಭರವಸೆ ನೀಡಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿಯೂ ಕೊರೋನಾ ನಿಯಂತ್ರಣ ಕ್ರಮಗಳ ಕಟ್ಟುನಿಟ್ಟಿನ ಪಾಲನೆಯಾಗಲಿದೆ ಎಂದೂ ಸಚಿವರು ತಿಳಿಸಿದ್ದಾರೆ. ಜೊತೆಗೆ ಮನೆಯಲ್ಲಿ ಕುದಿಸಿ ಆರಿಸಿದ ನೀರನ್ನೇ ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಗೆ ತರುವಂತೆಯೂ ಕಿವಿಮಾತು ಹೇಳಿದ್ದಾರೆ. ಅದರಂತೆ ಅನಾರೋಗ್ಯಕ್ಕೆ ತುತ್ತಾಗಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡುವುದಾಗಿಯೂ ತಿಳಿಸಿದ್ದಾರೆ. ಒಟ್ಟಿನಲ್ಲಿ ಮಕ್ಕಳಿಗೆ ಆತಂಕವನ್ನು ಉಂಟುಮಾಡದ ಪರಿಸರ ನಿರ್ಮಿಸುವ ಮೂಲಕವೇ ಪರೀಕ್ಷೆಗಳನ್ನು ನಡೆಸುವ ಮೂಲಕ ಮಾದರಿಯಾಗುವುದಾಗಿಯೂ ಸಚಿವರು ಹೇಳಿಕೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.