ನವದೆಹಲಿ: ಕೊರೋನಾವೈರಸ್ ದೇಶವನ್ನೇ ಲಾಕ್ಡೌನ್ ಸ್ಥಿತಿಗೆ ತಳ್ಳಿದೆ. ವ್ಯಾಪಾರ ವಹಿವಾಟು, ಜನಜೀವನ ಅಸ್ತವ್ಯಸ್ತಗೊಂಡಿದೆ. ಜೊತೆಗೆ ಇದರಿಂದಾಗಿ ದೇಶದ ಅರ್ಥ ವ್ಯವಸ್ಥೆಯೂ ಪಾತಾಳದತ್ತ ಮುಖ ಮಾಡಿದೆ. ಇಂತಹ ಪರಿಸ್ಥಿತಿಯಿಂದ ದೇಶವನ್ನು ಮೇಲೆತ್ತುವ ಸಲುವಾಗಿ ಕೊರೋನಾ ಅನ್ಲಾಕ್ ನಿಯಮಗಳನ್ನೂ ನಿಧಾನವಾಗಿ ಜಾರಿಗೆ ತರಲಾಗುತ್ತಿದ್ದು, ಈ ಹಂತದಲ್ಲಿ ವೇಗವಾಗಿ ಆರ್ಥಿಕ ಚಟುವಟಿಕೆಗಳ ಮೂಲಕ ಚೇತರಿಕೆ ಕಾಣುತ್ತಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕವೂ ಸ್ಥಾನ ಪಡೆದುಕೊಂಡಿದೆ ಎಂದು ವರದಿಯಾಗಿದೆ.
ಶೀಘ್ರ ಗತಿಯಲ್ಲಿ ಆರ್ಥಿಕ ಪುನಶ್ಚೇತನದತ್ತ ಸಾಗುತ್ತಿರುವ ಐದು ರಾಜ್ಯಗಳ ಪೈಕಿ ಕರ್ನಾಟಕವೂ ಒಂದಾಗಿದೆ. ಕೇರಳ, ಪಂಜಾಬ್, ತಮಿಳುನಾಡು, ಹರ್ಯಾಣ ಮತ್ತು ಕರ್ನಾಟಕಗಳು ಆರ್ಥಿಕ ಸ್ಥಿತಿಯಲ್ಲಿ ಹಿಡಿತವನ್ನು ಸಾಧಿಸುವಲ್ಲಿ ಮುಂಚೂಣಿಯಲ್ಲಿದೆ. ಆ ಮೂಲಕ ದೇಶದ ಜಿಡಿಪಿಗೆ 27% ದಷ್ಟು ಕೊಡುಗೆಯನ್ನು ನೀಡುತ್ತಿದೆ ಎಂದು ಮೂಲಗಳು ತಿಳಿಸಿವೆ.
ಈ ಕುರಿತಂತೆ ಮುಂಬೈನ ಆರ್ಥಿಕ ತಜ್ಞೆ ಗರಿಮಾ ಕಪೂರ್ ಅವರು ಗೂಗಲ್ ದತ್ತಾಂಶಗಳನ್ನು ಆಧರಿಸಿ ಅಧ್ಯಯನ ನಡೆಸಿದ್ದು, ನಂತರ ಈ ಮಾಹಿತಿ ನೀಡಿದ್ದಾರೆ. ಅತೀ ಹೆಚ್ಚು ವ್ಯಾಪಾರ ವಹಿವಾಟು ನಡೆಸುತ್ತಿದ್ದ ಭಾರತದ ರಾಜ್ಯಗಳಾದ ಮಹಾರಾಷ್ಟ್ರ, ಗುಜರಾತ್ಗಳೇ ಕೊರೋನಾದಿಂದಾಗಿ ಇನ್ನೂ ಚೇತರಿಸಿಕೊಂಡಿಲ್ಲ. ಆದರೆ ಈ ಐದು ರಾಜ್ಯಗಳು ಕೊರೋನಾ ಜೊತೆಗೆ ಸರಿಯಾದ ಹೋರಾಟ ನಡೆಸುತ್ತಲೇ, ಆರ್ಥಿಕ ಮಟ್ಟವನ್ನು ಸುಧಾರಣೆ ಮಾಡುವತ್ತಲೂ ಗಮನ ನೀಡಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.