ಮುಂಬಯಿ: ಮಹಾರಾಷ್ಟ್ರದ ರತ್ನಗಿರಿ ಮತ್ತು ಸಿಂಧುದುರ್ಗ ಜಿಲ್ಲೆಗಳಲ್ಲಿ ಸೈಕ್ಲೋನ್ ನಿಸರ್ಗ ಆವಾಂತರ ಸೃಷ್ಟಿ ಮಾಡುತ್ತಿದೆ. ಇಲ್ಲಿಂದ ಸುಮಾರು 1 ಲಕ್ಷ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದೆ. ಒಟ್ಟು 21 ಎನ್ಡಿಆರ್ಎಫ್ ಪಡೆಗಳು ಇಲ್ಲಿ ನಿಯೋಜನೆಗೊಳಿಸಲಾಗಿದೆ ಎಂದು ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆ(ಎನ್ಡಿಆರ್ಎಫ್)ಯ ಪ್ರಧಾನ ನಿರ್ದೇಶಕ ಎಸ್.ಎನ್ ಪ್ರಧಾನ್ ಹೇಳಿದ್ದಾರೆ.
“ಒಟ್ಟು 43 ಎನ್ಡಿಆರ್ಎಫ್ ತಂಡಗಳನ್ನು ಸೈಕ್ಲೋನ್ ಪೀಡಿತ ಮಹಾರಾಷ್ಟ್ರ ಮತ್ತು ಗುಜರಾತಿನಲ್ಲಿ ನಿಯೋಜನೆಗೊಳಿಸಲಾಗಿದೆ. ಮಹಾರಾಷ್ಟ್ರದಲ್ಲಿ 21 ತಂಡ ಮತ್ತು ಗುಜರಾತಿನಲ್ಲಿ 16 ತಂಡಗಳನ್ನು ನಿಯೋಜನೆಗೊಳಿಸಲಾಗಿದೆ. ಮಹಾರಾಷ್ಟ್ರ, ಗುಜರಾತ್ ಮತ್ತು ಡಿಯು-ಡಾಮನ್ ಪ್ರದೇಶದಿಂದ ಭಾರೀ ಪ್ರಮಾಣದಲ್ಲಿ ಜನರನ್ನು ಸ್ಥಳಾಂತರ ಮಾಡಲಾಗಿದೆ” ಎಂದಿದ್ದಾರೆ.
ಚಂಡಮಾರುತದ ಕಾರಣದಿಂದಾಗಿ ಸಂಭವಿಸಬಹುದಾದ ದೊಡ್ಡ ಅಪಾಯವನ್ನು ತಡೆಗಟ್ಟುವ ಸಲುವಾಗಿ ಸ್ಥಳಿಯ ಜನರ, ಪೊಲೀಸರ ಮತ್ತು ಸ್ಥಳಿಯ ಆಡಳಿತಗಳ ಸಹಕಾರದೊಂದಿಗೆ ಸ್ಥಳಾಂತರ ಕಾರ್ಯಾಚರಣೆ ನಡೆಯುತ್ತಿದೆ ಎಂದಿದ್ದಾರೆ.
“ಮಹಾರಾಷ್ಟ್ರದಲ್ಲಿ, ಅದರಲ್ಲೂ ಕರಾವಳಿ ಭಾಗದಲ್ಲಿ ಸೆಕ್ಷನ್ 144 ಅನ್ನು ವಿಧಿಸಲಾಗಿದೆ. ಪ್ರತಿಯೊಬ್ಬರೂ ಸುರಕ್ಷಿತವಾಗಬೇಕು ಎಂಬ ಕಾರಣದಿಂದ ಹೆಚ್ಚುವರಿ ಕಾಳಜಿ ವಹಿಸುತ್ತಿದ್ದೇವೆ. ಮನೆಯೊಳಗೆ ಇರುವಂತೆ ಜನರಲ್ಲಿ ಮನವಿ ಮಾಡಿಕೊಳ್ಳುತ್ತಿದ್ದೇವೆ” ಎಂದು ಮುಂಬಯಿ ಉಪ ಪೊಲೀಸ್ ಮಹಾ ನಿರ್ದೇಶಕ ಪ್ರಣಯ ಅಶೋಕ್ ಹೇಳಿದ್ದಾರೆ.
ಸೈಕ್ಲೋನ್ ನಿಸರ್ಗ 6 ಗಂಟೆಗಳಲ್ಲಿ ಕೊನೆಗೊಳ್ಳುವ ಸಾಧ್ಯತೆ ಇದ್ದು, ಬಳಿಕ ಅದು ಕ್ಷೀಣವಾಗಲಿದೆ. ಗುರುವಾರ ಬೆಳಿಗ್ಗೆ ಕ್ಷೀಣವಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.