ನವದೆಹಲಿ: ಕೋಲ್ಕತ್ತಾ ಬಂದರು ಟ್ರಸ್ಟ್ಗೆ ಶ್ಯಾಮ ಪ್ರಸಾದ್ ಮುಖರ್ಜಿ ಟ್ರಸ್ಟ್ ಎಂದು ಹೆಸರಿಡಲು ಕೇಂದ್ರ ಸಂಪುಟವು ಬುಧವಾರ ಅನುಮೋದನೆಯನ್ನು ನೀಡಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಅವರು ಇಂದು ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಶ್ಯಾಮ ಪ್ರಸಾದ್ ಮುಖರ್ಜಿ ಅವರು ಕೇಂದ್ರ ಸರ್ಕಾರದ ಸಚಿವರಾಗಿದ್ದವರು ಮತ್ತು ಕಾಶ್ಮೀರದಲ್ಲಿ ಅವರು ಹುತಾತ್ಮರಾಗಿದ್ದಾರೆ. ಕೋಲ್ಕತ್ತಾ ಬಂದರು ಟ್ರಸ್ಟ್ಗೆ ಅವರ ಹೆಸರನ್ನು ಮರು ನಾಮಕರಣ ಮಾಡುವ ಪ್ರಸ್ತಾಪವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 11 ರಂದು ಘೋಷಣೆ ಮಾಡಿದ್ದರು” ಎಂದಿದ್ದಾರೆ.
ಬಂದರು ಟ್ರಸ್ಟ್ನ 150ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಟ್ರಸ್ಟ್ಗೆ ಶ್ಯಾಮ ಪ್ರಸಾದ್ ಮುಖರ್ಜಿ ಹೆಸರನ್ನು ಇಡುವ ಘೋಷಣೆಯನ್ನು ಮಾಡಿದ್ದರು. ಪ್ರಧಾನಿ ಮಾಡಿದ ಘೋಷಣೆಯನ್ನು ಕಾರ್ಯರೂಪಕ್ಕೆ ತರುವ ಸಲುವಾಗಿ ಸಂಪುಟದ ಅನುಮೋದನೆ ಸಿಕ್ಕಿದೆ.
ರೈತರಿಗೆ ಪ್ರಯೋಜನವನ್ನು ನೀಡುವ ಸಲುವಾಗಿ ಅಗತ್ಯ ಸರಕುಗಳ ಕಾಯ್ದೆಗೆ ಅಗತ್ಯ ತಿದ್ದುಪಡಿಗಳನ್ನು ತರುವುದಕ್ಕೂ ಸಂಪುಟ ಅನುಮೋದನೆಯನ್ನು ನೀಡಿದೆ.
“ಇನ್ನು ಮುಂದೆ ರೈತರು ಪರಸ್ಪರ ಒಪ್ಪಿಗೆಯ ಆಧಾರದ ಮೇಲೆ ಹೆಚ್ಚಿನ ಬೆಲೆಗೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುವ ಸ್ವಾತಂತ್ರ್ಯವನ್ನು ಹೊಂದಲಿದ್ದಾರೆ” ಎಂದು ಜಾವ್ಡೇಕರ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.