ಬೆಂಗಳೂರು : ಅಟಲ್ ಭೂಜಲ ಯೋಜನೆಯ ಮೊದಲ ಹಂತದಲ್ಲಿ ರಾಜ್ಯದ 16 ಜಿಲ್ಲೆಗಳಲ್ಲಿ ಅಂತರ್ಜಲ ಅಭಿವೃದ್ಧಿಗಾಗಿ ಯೋಜನೆಗಳನ್ನು ರಾಜ್ಯ ಸರ್ಕಾರ ರೂಪಿಸಿದೆ ಎಂದು ಸಚಿವ ಮಾಧುಸ್ವಾಮಿ ಹೇಳಿದ್ದಾರೆ.
ಕರ್ನಾಟಕದ ಹದಿನಾರು ಜಿಲ್ಲೆಗಳ 41 ತಾಲೂಕುಗಳಿಗೆ ಸಂಬಂಧಿಸಿದಂತೆ ನೀರಿನ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಅವರು ತಿಳಿಸಿದ್ದಾರೆ. ಆ ಮೂಲಕ ನೀರಿಗಾಗಿ ಬವಣೆ ಪಡುವ ಜಿಲ್ಲೆಗಳಲ್ಲಿ ಅಂತರ್ಜಲ ಅಭಿವೃದ್ಧಿಗಾಗಿ ಕಾರ್ಯ ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ ಎಂದೂ ಅವರು ಹೇಳಿದ್ದಾರೆ. ಇದಕ್ಕಾಗಿ ಕೇಂದ್ರ ಸರ್ಕಾರ 1,230 ಕೋಟಿ ರೂ. ಗಳನ್ನು ಮೀಸಲಿಟ್ಟಿರುವುದಾಗಿಯೂ ಸಚಿವರು ತಿಳಿಸಿದ್ದಾರೆ.
ಈ ಯೋಜನೆಯ ಫಲಾನುಭವಿ ಜಿಲ್ಲೆಗಳನ್ನು ಕೇಂದ್ರ ಸರ್ಕಾರವೇ ಆಯ್ಕೆ ಮಾಡಿದೆ. ಆಯ್ಕೆಯಾದ ಜಿಲ್ಲೆಗಳಲ್ಲಿ ಅಂತರ್ಜಲದ ಕೊರತೆ ಇದ್ದು, ನುರಿನ ಮಟ್ಟ ಕುಸಿದಿದೆ. ಅದಕ್ಕಾಗಿ ಅಂತರ್ಜಲದ ಮಟ್ಟವನ್ನು ಹೆಚ್ಚಿಸುವ ಮೂಲಕ ನೈಸರ್ಗಿಕವಾಗಿಯೇ ನೀರಿನ ಕೊರತೆ ಬಾಧಿಸದಂತೆ ಕ್ರಮ ಕೈಗೊಳ್ಳುವುದಾಗಿಯೂ ಅವರು ಹೇಳಿದ್ದಾರೆ. ಈ ಬಗ್ಗೆ ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿ, ಸಾಧಕ ಬಾಧಕಗಳ ಚರ್ಚೆ ನಡೆಸಲಾಗಿದೆ ಎಂದಿದ್ದಾರೆ.
ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಚಿಕ್ಕಮಗಳೂರು, ಬಾಗಲಕೋಟೆ, ಗದಗ, ಹಾಸನ, ಬೆಳಗಾವಿ ಮೊದಲಾದ ಜಿಲ್ಲೆಗಳು ಈ ಯೋಜನೆಗೆ ಆಯ್ಕೆಯಾಗಿವೆ ಎಂದು ಅವರು ತಿಳಿಸಿದ್ದಾರೆ. ಜೊತೆಗೆ ಬೆಂಗಳೂರಿನ ಬೆಳ್ಳಂದೂರು ಕೆರೆಯ ಹೂಳೆತ್ತಲು 300 ಕೋಟಿ ರೂ. ಬಿಡುಗಡೆಯಾಗಿದ್ದು, ಸಾರ್ವಜನಿಕರ ಸಹಕಾರವೂ ಬೇಕಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.